Advertisement

ರಾಹುಲ್, ಪ್ರಿಯಾಂಕಾ ಬಂಧನ ಖಂಡನೀಯ, ಈ ಕೃತ್ಯಕ್ಕಾಗಿ ಯೋಗಿ ಆದಿತ್ಯನಾಥ್ ಸರ್ಕಾರ ಬೆಲೆ ತೆರಲಿದೆ: ಸಿದ್ದರಾಮಯ್ಯ ಕಿಡಿ!

Advertisement

ಉತ್ತರ ಪ್ರದೇಶ ಹತ್ರಾಸ್​ಗೆ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ದಲಿತ ಯುವತಿಯ ಕುಟುಂಬಿಕರನ್ನು ಭೇಟಿಯಾಗಲು ಹೊರಟಿದ್ದ ಕಾಂಗ್ರೆಸ್​ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯವರನ್ನು ಉತ್ತರ ಪ್ರದೇಶ ಪೊಲೀಸರು ಬಂದಿಸಿದ್ದು ಇದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. 'ಉತ್ತರಪ್ರದೇಶದ ಪೊಲೀಸರು ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ. ಈ ಇಬ್ಬರು ನಾಯಕರ ಬಂಧನ ಮತ್ತು ಅವರ ಜೊತೆಗಿನ ಪೊಲೀಸರ ದುರ್ವರ್ತನೆಗೆ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಬೆಲೆ ತೆರಬೇಕಾಗುತ್ತದೆ' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಪೊಲೀಸ್ ರಾಜ್ಯದಲ್ಲಿ‌ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಅವರೇ ಸುರಕ್ಷಿತರಲ್ಲ ಎಂದ‌ ಮೇಲೆ ಅಲ್ಲಿನ‌ ದಲಿತರು,‌ಮಹಿಳೆಯರು, ರೈತರು,ಕಾರ್ಮಿಕರು ಹೇಗೆ ಸುರಕ್ಷಿತರಾಗಿರಲು ಸಾಧ್ಯ? ಆದಿತ್ಯನಾಥ್ ಸರ್ಕಾರ ಪ್ರಜಾಪ್ರಭುತ್ವಕ್ಕೆ ಕಳಂಕ. ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಪೊಲೀಸರು ಗೃಹಬಂಧನದಲ್ಲಿರಿಸಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದ ನೈಜ ಬಣ್ಣ ಬಯಲಾಗುತ್ತದೆ ಎನ್ನುವ ಕಾರಣಕ್ಕೆ ಆ ಕುಟುಂಬದ ಭೇಟಿಗೆ ನಮ್ಮ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕ ಅವರಿಗೆ ಅವಕಾಶ ನೀಡಲಾಗುತ್ತಿಲ್ಲ' ಎಂದವರು ಕಿಡಿ ಕಾರಿದ್ದಾರೆ. ನಿಮಗೆ ಈ ಬರಹ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ಹಾಗೂ E-mail ID: kannadamedia1947@gmail.com ಗೆ ಸಂಪರ್ಕಿಸಿ. ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

Advertisement
Advertisement
Recent Posts
Advertisement