Advertisement

ಕೆಪಿಸಿಸಿ ಅಧ್ಯಕ್ಷರಾದ ನಂತರ ಮೊತ್ತ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ.

Advertisement

ಹಿಂದೂ ಧರ್ಮ ಬಿಜೆಪಿಗರ ಆಸ್ತಿಯಲ್ಲ, ನಾವೆಲ್ಲರೂ ಹಿಂದೂಗಳೇ!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭಾನುವಾರ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು.

ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಗಾಣಿಗ ಕೊಲ್ಲೂರು ಹಾಗೂ ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಅದ್ದೂರಿ ಸ್ವಾಗತ. ಇವರೊಂದಿಗೆ ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ ಗೋಪಾಲ್ ಪೂಜಾರಿ , ಕಾಪು ಕ್ಷೇತ್ರದ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ , ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾದ ಪುಷ್ಪ ಅಮರನಾಥ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು , ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ವಾಗ್ಳೆ , ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎಸ್ ರಾಜು ಪೂಜಾರಿ , ಯು.ಆರ್. ಸಭಾಪತಿ , ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮದನ್ ಕುಮಾರ್ , ವಂಡ್ಸೆ ಬಾಕ್ಲ ಕಾಂಗ್ರೆಸ್ ಅಧ್ಯಕರಾದ ಪ್ರದೀಪ್ ಕುಮಾರ್ ಶೆಟ್ಟಿ , ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ. ರಮೇಶ್ ಗಾಣಿಗ ಕೊಲ್ಲೂರು , ತಾಲೂಕು ಪಂಚಾಯತ್ ಸದಸ್ಯ ಗ್ರೀಷ್ಮಾ ಗಿರಿಧರ್ ಭಿಡೆ , ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ವಿ ಅಮೀನ್ , ಮಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ , ಬೈಂದೂರು ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ್ ಪೂಜಾರಿ ಉಪ್ಪುಂದ , ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಸನತ್ ಬಳೆಗಾರ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದು. ದೇವಳದ ಅರ್ಚಕ ನರಸಿಂಹ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು. ದೇವಳದ ವತಿಯಿಂದ ಡಿಕೆ ಶಿವಕುಮಾರ್ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದರು.

Advertisement
Advertisement
Recent Posts
Advertisement