Advertisement

ಆತ್ಮಹತ್ಯೆ ಮಾಡಿಕೊಳ್ಳುವ ಅಸಹಾಯಕ ರೈತರು ಹೇಡಿಗಳಲ್ಲ ಬಿ.ಸಿ.ಪಾಟೀಲ್ ಅವರೇ, ಹಣ-ಅಧಿಕಾರಕ್ಕಾಗಿ ಆತ್ಮವನ್ನು ಮಾರಿಕೊಂಡಿರುವ ನೀವುಗಳು ಹೇಡಿಗಳು

Advertisement

ಆತ್ಮಹತ್ಯೆ ಮಾಡಿಕೊಳ್ಳುವ ಅಸಹಾಯಕ ರೈತರು ಹೇಡಿಗಳಲ್ಲ ಬಿ.ಸಿ.ಪಾಟೀಲ್ ಅವರೇ, ಹಣ-ಅಧಿಕಾರಕ್ಕಾಗಿ ಆತ್ಮವನ್ನು ಮಾರಿಕೊಂಡವರು ಹೇಡಿಗಳು. ಅನ್ನ ಕೊಡುವ ರೈತರನ್ನು ನಿಂದಿಸಿ ಉಂಡಮನೆಗೆ ದ್ರೋಹ ಬಗೆಯುವ ನಿಮಗೆ ಒಂದು ಕ್ಷಣವೂ ಕೃಷಿಖಾತೆಯಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 'ತಮ್ಮ ಹೆಂಡತಿ ಮಕ್ಕಳನ್ನು ನೋಡಿಕೊಳ್ಳಲಾಗದೆ, ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು' ಎಂದು ಸಚಿವ ಬಿ.ಸಿ ಪಾಟೀಲ್ ನೀಡಿರುವ ಹೇಳಿಕೆಗೆ ಸಿದ್ದರಾಮಯ್ಯ ಇಂದು ಆಕ್ರೋಶಭರಿತರಾಗಿ ಖಂಡಿಸಿದ್ದಾರೆ. ಮಳೆ ಮತ್ತು ಪ್ರವಾಹದಿಂದ ಸರ್ವಸ್ವವನ್ನು ಕಳೆದುಕೊಂಡು ಬೀದಿಪಾಲಾಗಿರುವ ರೈತರಿಗೆ ಪರಿಹಾರಕೊಟ್ಟು ನೆರವಾಗುವ ಯೋಗ್ಯತೆ ನಿಮ್ಮ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಇಲ್ಲ. ಗಾಯದ ಮೇಲೆ ಬರ ಎಳೆದಂತೆ ಅದೇ ರೈತರನ್ನು ಹೇಡಿಗಳೆಂದು ಜರಿಯುತ್ತೀರಾ? ಹೊಟ್ಟೆಗೆ ಏನು ತಿನ್ತಿದ್ದೀರಾ? ವಿನಾಶಕಾರಿ ಕಾನೂನುಗಳನ್ನು ಜಾರಿಗೆ ತಂದು ರೈತರನ್ನು ಆತ್ಮಹತ್ಯೆಗೆ ದೂಡಲು ಹೊರಟಿರುವವರು ಯಾರು? ನ್ಯಾಯಕ್ಕಾಗಿ ಹೋರಾಡುತ್ತಿರುವ ಸ್ವಾಭಿಮಾನಿ ರೈತರ ಮೇಲೆ ಲಾಠಿಯೇಟು, ಅಶ್ರುವಾಯು, ಜಲಫಿರಂಗಿಗಳ ಮೂಲಕ ದೌರ್ಜನ್ಯವೆಸಗುತ್ತಿರುವ ಕೊಲೆಗಡುಕ ಮನಸ್ಸು ಯಾರದು ಬಿ.ಸಿ ಪಾಟೀಲರೇ ಎಂದವರು ಪ್ರಶ್ನಿಸಿದ್ದಾರೆ. ಬಿ.ಸಿ ಪಾಟೀಲರ ಈ ಮೇಲಿನ ರೈತವಿರೋಧಿ ಹೇಳಿಕೆಯನ್ನು ವಿರೋಧಿಸಿ ಸೋಷಿಯಲ್ ಮೀಡಿಯಾಗಳಾದ ಫೇಸ್‌ಬುಕ್‌, ವಾಟ್ಸ್ಯಾಪ್, ಟ್ವೀಟರ್, ಇನ್ಸ್ಟಾಗ್ರಾಂ ಗಳಲ್ಲಿ ಕಳೆದೆರಡು ದಿನಗಳಿಂದ ದೇಶಾದ್ಯಂತ ಜನತೆ ತೀವ್ರವಾಗಿ ಖಂಡಿಸಿದ್ದು. ಬಿ.ಸಿ ಪಾಟೀಲ್ ಈ ಹೇಳಿಕೆಯಿಂದಾಗಿ ಅತಿಹೆಚ್ಚು ಟ್ರೋಲ್‌ಗೆ ಒಳಗಾಗಿದ್ದಾರೆ. ______________________________________ ►►ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ( ಜಾಹೀರಾತು ವಿಭಾಗ) ಹಾಗೂ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►►ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

Advertisement
Advertisement
Recent Posts
Advertisement