Advertisement

ಅಯೋದ್ಯೆ: ದೇಣಿಗೆಯ ಹಣದಿಂದ 2 ಕೋಟಿ ಬೆಲೆಯ ಭೂಮಿ 18.5 ಕೋಟಿಗೆ ಖರೀದಿ, ತನಿಖೆಯಾಗಲಿ- ಕೊಡವೂರು

Advertisement

ರಾಮ ಮಂದಿರ ನಿರ್ಮಾಣದ ನಿಧಿ ವಿನಿಯೋಗದಲ್ಲಿ ನಡೆದ ಅವ್ಯವಹಾರವನ್ನು ಮೊದಲಿಗೆ ಬಯಲಿಗೆಳೆದವರು ಆಪ್‌ನ ಉತ್ತರ ಪ್ರದೇಶದ ಉಸ್ತುವಾರಿ ಸಂಜಯ್ ಸಿಂಗ್‌. ತದನಂತರ ರಾಮ ಮಂದಿರದ ಟ್ರಸ್ಟ್ ಭ್ರಷ್ಟವಾಗಿದೆ. ಅದರಲ್ಲಿ ಅವ್ಯವಹಾರ ನಡೆಯುತ್ತಿದೆ ಸಿ.ಬಿ.ಐ. ತನಿಖೆ ನಡೆಸಿ ಎಂದು ನಿರ್ವಾಣಿ ಅಖಾರ ಮುಖ್ಯಸ್ಥ ಮಹಂತ್ ಧರಮ್ ದಾಸ್ ಹಾಗೂ ದಿಗಂಬರ ಅಖಾರದ ಮುಖ್ಯಸ್ಥ ಮಹಂತ್ ಸುರೇಶ್ ದಾಸ್ ಅವರು ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ಅದರೊಂದಿಗೆ ಅಯೋಧ್ಯಾ ಟ್ರಸ್ಟ್ ಈಗಾಗಲೇ ಕೆಲವೇ ದಿನಗಳ ಅಂತರದಲ್ಲಿ ಕೇವಲ ಎರಡು ಕೋಟಿ ರೂಪಾಯಿಗಳಿಗೆ ಖರೀದಿಸಿದ ಸ್ಥಳವನ್ನು ಹದಿನೆಂಟುವರೆ ಕೋಟಿ ರೂಪಾಯಿ ಹಣ ನೀಡಿ ಖರೀದಿಸಿದ ಬಗ್ಗೆ ಹೇಳಿಕೆಯನ್ನು ನೀಡಿರುವುದು ಉಲ್ಲೇಖಾರ್ಹ ಮತ್ತು ಇದು ದೇವರ ಹೆಸರಿನಲ್ಲಿ ನಡೆದ ಬಹುದೊಡ್ಡ ಹಗರಣವಾಗಿದೆ. ಆ ಹಣ ದೇಶದ ಜನರಿಂದ ಸಂಗ್ರಹಿಸಿದ ಹಣವಾದ ಕಾರಣಕ್ಕಾಗಿ ಈ ಕುರಿತು ತನಿಖೆ ಆಗಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ. ಅವರು ಬುಧವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ದೇಶದ ಸಮಸ್ತ ಜನರು ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆಯನ್ನು ನೀಡಿರುವಾಗ, ಈ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಆ ಹಣದ ಕುರಿತಾದ ಲೆಕ್ಕವನ್ನು ಪ್ರಶ್ನಿಸುವ ಹಕ್ಕಿದೆ. ಹೀಗಿರುವಾಗ ನಡೆದ ಅವ್ಯವಹಾರದ ಬಗ್ಗೆ ಮಾತೆತ್ತಿದರೆ ಹಿಂದೂಗಳ ಭಾವನೆಗೆ ಘಾಸಿ ಹೇಗಾಗುತ್ತದೆ? ನಿಧಿ ವಿನಿಯೋಗದ ಬಗ್ಗೆ ಮಾತನಾಡಿದರೆ ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಸೊರಕೆಯವರನ್ನೂ ಟಾರ್ಗೆಟ್ ಮಾಡಬೇಕಾಗುತ್ತದೆ ಎನ್ನುವ ಬಿಜೆಪಿ ಜಿಲ್ಲಾಧ್ಯಕ್ಷರ ಬೆದರಿಕೆ ಬಾಲಿಷವಾದುದಾಗಿದೆ. ಈ ಟ್ರಸ್ಟ್ ರಚಿಸಿದವರಿಗೆ ಅವರದ್ದೇ ಆದ ಸ್ಥಾಪಿತ ಹಿತಾಸಕ್ತಿಗಳಿರುವುದರಿಂದ ಹಗರಣಗಳು ನಡೆಯುತ್ತಿದೆ. ಹಾಗಾಗಿ ರಾಮ ಭಕ್ತರಿಂದ ಸಂಗ್ರಹಿಸಿದ ಹಣವನ್ನು ರಿಯಲ್ ಎಸ್ಟೇಟಿಗಾಗಿ ವಿನಿಯೋಗಿಸುವುದು ರಾಮನಿಗೆ ಹಾಗೂ ರಾಮಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಆತನ ಭಕ್ತರಿಗೆ ದ್ರೋಹ ಬಗೆದಂತೆ ಎಂದವರು ಹೇಳಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಯಡಮೊಗೆಯಲ್ಲಿ ಕಾರು ಹತ್ತಿಸಿ ನಡೆಸಿದ ಕೊಲೆ ಪ್ರಕರಣದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಇರುವುದು ಅವರ ಬಂಧನದಿಂದ ಸಾಬೀತಾಗಿದೆ. ಅದರೆ ಸತ್ತವರ ಬಗ್ಗೆ ಬರೇ ಸಹಾನುಭೂತಿ ಪ್ರದರ್ಶಿಸಿದರೆ ಸಾಲದು. ಈ ಹತ್ಯೆಯಿಂದ ಉದಯ ಗಾಣಿಗರ ಕುಟುಂಬ ಬೀದಿಪಾಲಾಗಿದೆ. ಅವರ ಕುಟುಂಬಕ್ಕೆ ಹೆಚ್ಚಿನ ಧನ ಸಹಾಯ ಸಿಗುವಂತಾಗಬೇಕು. ಬಿಜೆಪಿ ಜಿಲ್ಲಾಧ್ಯಕ್ಷರು ಇದರ ಬಗ್ಗೆ ಅದೇಕೆ ಹೆಚ್ಚಿನ ಮುತುವರ್ಜಿ ವಹಿಸುತ್ತಿಲ್ಲ? ಕರಾವಳಿ ಪ್ರದೇಶಗಳಲ್ಲಿ ಯಾವುದೇ ಸಾವು ನಡೆದಾಗ, ಪೋಲಿಸ್ ತನಿಖೆಗೆ ಆಸ್ಪದ ನೀಡದೆ, ಊಹಾಪೋಹದ ಹೇಳಿಕೆ ನೀಡುವ ಮೂಲಕ ತನಿಖೆಯ ದಿಕ್ಕು ತಪ್ಪಿಸುವ ಉಡುಪಿ ಚಿಕ್ಕಮಗಳೂರು ಸಂಸದೆ ಹಾಗೂ ಈ ಭಾಗದ ಸ್ವಯಂಘೋಷಿತ ಹಿಂದೂ ಮುಖಂಡರು ತಮ್ಮದೇ ಪಕ್ಷದ ಕಾರ್ಯಕರ್ತನ ಅಮಾನುಷ ಹತ್ಯೆಯಾದಾಗ ಮೌನ ವಹಿಸಿರುವುದರ ಹಿಂದಿನ ರಹಸ್ಯವೇನು? ಹಾಗಾದರೆ ಇವರದ್ದೆ ಪಕ್ಷದ ಪದಾದಿಕಾರಿಗಳು ಮಾಡಿದ ಓರ್ವ ಹಿಂದೂ ಕಾರ್ಯಕರ್ತನ ಜೀವಕ್ಕೆ ಬೆಲೆಯೇ ಇಲ್ಲವೇ ಎಂದವರು ಆಕ್ರೋಶ ವ್ಯಕ್ತಪಡಿಸಿದರು. ಕರಾವಳಿ ಪ್ರದೇಶದಲ್ಲಿ ಪ್ರತಿಯೊಬ್ಬ ಹಿಂದುವೂ ದೈವ-ದೇವರ ಆರಾಧನೆಯನ್ನು ಅನಾದಿ ಕಾಲದಿಂದಲೂ ಮಾಡಿ ಕೊಂಡು ಬರುತ್ತಿದ್ದಾರೆ. ಬಿಜೆಪಿ ಪಕ್ಷ ಹುಟ್ಟಿದ ನಂತರ ಇಲ್ಲಿ ಯಾವುದೇ ದೈವ- ದೇವರುಗಳ ಆರಾಧನೆ ಪ್ರಾರಂಭಗೊಂಡಿದ್ದಲ್ಲ. ತಮ್ಮ ಸ್ವಾರ್ಥ ಸಾಧನೆಗಾಗಿ ದೇವರುಗಳನ್ನು ಬಳಸಿಕೊಳ್ಳುವವರನ್ನು ಪ್ರಶ್ನಿಸುವ ವ್ಯಕ್ತಿಗಳ ವಿರುದ್ಧ ಬಿಜೆಪಿ ಪದಾದಿಕಾರಿಗಳ ಹೇಳಿಕೆ ಅವರಲ್ಲಿಯ ಹಿಂದೂ ಸಂಸ್ಕೃತಿಯ ಅರಿವಿನ ಕೊರತೆ ಎದ್ದು ತೋರುತ್ತದೆ ಎಂದು ಹೇಳಿದ್ದಾರೆ. ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (*ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (*ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement