Advertisement

ಪೆಟ್ರೋಲ್ ಬೆಲೆ ನೂರು: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ.

Advertisement

ರಾಜ್ಯದಾದ್ಯಂತ ಇಂದಿನಿಂದ ಐದು ದಿನಗಳ ಕಾಲ ಈ ಕುರಿತು ರಾಜ್ಯ ಕಾಂಗ್ರೆಸ್ 'ಪೆಟ್ರೋಲ್ ಡೀಸೆಲ್ ಬೆಲೆಯು ಲೀಟರ್‌ಗೆ ನೂರು ರೂಪಾಯಿ' ತಲುಪಿದ್ದನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದು ರಾಜ್ಯದ ಸುಮಾರು ಐದು ಸಾವಿರ ಪೆಟ್ರೋಲ್ ಬಂಕ್‌ಗಳ ಎದುರು ಪ್ರತಿಭಟನೆ ನಡೆಯಲಿದೆ ಎಂದು ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಕಟಿಸಿದ್ದರು. ಆ ಕುರಿತು ಇಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಕೇಂದ್ರ ಸ್ಥಳದ ಪ್ರಮುಖ ಪೆಟ್ರೋಲ್ ಬಂಕ್ ಎದುರುಗಡೆ 'ಸಾಂಕೇತಿಕ ಪ್ರತಿಭಟನೆ' ನಡೆಸಲಾಯಿತು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವರಾದ ಶ್ರೀ ವಿನಯ್‍ ಕುಮಾರ್ ಸೊರಕೆ, ಇಂಧನ ಬೆಲೆಯನ್ನು ಹೆಚ್ಚಿಸುವ ಮೂಲಕ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ.ಪೆಟ್ರೋಲ್ ಮತ್ ತುಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವಂತೆ ನಾವು ಒತ್ತಾಯಿಸುತ್ತೇವೆ.ಇಂಧನವು ಜಿ.ಎಸ್.ಟಿ.ಯ ವ್ಯಾಪ್ತಿಗೆ ಬರಬೇಕು.ಬಿಜೆಪಿ ಸರ್ಕಾರದ ತಪ್ಪು ನೀತಿಗಳಿಂದಾಗಿ ದೇಶದ ಜನರು ಕಳೆದ ಒಂದೂವರೆ ವರ್ಷದಿಂದ ಕೋವಿಡ್ -19ನ ಪ್ರಭಾವದ ವಿರುದ್ಧ ಹೋರಾಡುತ್ತಿದ್ದರು. "ಒಂದುಕಡೆ, ಅವರು ಸರಿಯಾದ ಸಮಯದಲ್ಲಿ ಔಷಧಿಗಳನ್ನು ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಲಿಲ್ಲ ಮತ್ತು ಇನ್ನೊಂದೆಡೆ, ಆರ್ಥಿಕತೆಯ ವಿಫಲತೆ ಮತ್ತು ವ್ಯಾಪಕ ನಿರುದ್ಯೋಗದಿಂದಾಗಿ ಜನರು ಬಳಲುತ್ತಿದ್ದಾರೆ" ಎಂದು ಅವರು ಹೇಳಿದರು. ಈ ಸಂಧರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ರವರು 'ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ದಾಖಲೆಯ ಪ್ರಮಾಣದಲ್ಲಿ ಇಳಿಕೆ ಆಗಿದ್ದರೂ ಕೂಡ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮೂಲ ಪೆಟ್ರೋಲ್ ಬೆಲೆಗಿಂತಲೂ ಜಾಸ್ತಿ ತೆರಿಗೆ ವಿಧಿಸುವ ಮೂಲಕ ದಾಖಲೆಯ ನೂರು ರೂಪಾಯಿಯ ಸಮೀಪಕ್ಕೆ ಪೆಟ್ರೋಲ್ ಬೆಲೆ ಏರಿಕೆಯಾಗಲು ಕಾರಣರಾಗಿದ್ದಾರೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಿಂದಾಗಿ ಆಹಾರ ಸಾಮಗ್ರಿಗಳ ಸಾಗಾಟ ವೆಚ್ಚ ಜಾಸ್ತಿಯಾಗುವ ಕಾರಣಕ್ಕಾಗಿ ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಾಣುತ್ತಿದೆ. ಅವೈಜ್ಞಾನಿಕವಾದ ನೋಟು ಬ್ಯಾನ್ ಹಾಗೂ ಅನಗತ್ಯವಾದ ಲಾಕ್‌ಡೌನ್ ನಿಂದ ಜನರು ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದು ಇದೀಗ ಬೆಲೆ ಏರಿಕೆಯಿಂದಾಗಿ ಜನಜೀವನ ತೀರಾ ದುಸ್ಥರವಾಗಿದೆ. ಪೆಟ್ರೋಲ್ ಲೀಟರ್ ಒಂದರ ಮೂಲಬೆಲೆ 35ರೂ. ಆಗಿದ್ದರೆ ಕೇಂದ್ರದ ಮೋದಿ ಸರ್ಕಾರ 34ರೂ. ತೆರಿಗೆ ಹಾಕಿದರೆ ರಾಜ್ಯದ ಯಡಿಯೂರಪ್ಪ ಸರ್ಕಾರ 26ರೂ. ತೆರಿಗೆ ಹಾಕುವ ಮೂಲಕ ಕೊರೊನಾ ಸಮಯದಲ್ಲಿ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ' ಎಂದವರು ಆರೋಪಿಸಿದರು. ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಮನಮೋಹನ್ ಸಿಂಗ್ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂದಿನ ಕಚ್ಚಾತೈಲ ಬೆಲೆಯ ಮೂರುಪಟ್ಟು ದರ ಇದ್ದಾಗಲೂ ಕೇವಲ 3.16 ಪೈಸೆ ಮಾತ್ರವೇ ತೆರಿಗೆಯನ್ನು ಕೇಂದ್ರ ಸರ್ಕಾರ ವಿಧಿಸುವ ಮೂಲಕ ಜನರ ಮೇಲಿನ ಹೊರೆಯನ್ನು ಕಡಿಮೆಗೊಳಿಸಿತ್ತು. ಬಹುಶಃ ನರೇಂದ್ರ ಮೋದಿಯವರಂತಹ ಜನ ವಿರೋಧಿ ಸರ್ಕಾರ ಸ್ವಾತಂತ್ರ್ಯಾ ನಂತರ ಬಂದಿರಲಿಲ್ಲ ಎಂದವರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿಯ ಶ್ರೀ ರಾಜು, ಜಿಲ್ಲಾ ಮುಖಂಡರಾದ ಎಂ.ಎ.ಗಫೂರ್, ವೆರೋನಿಕಾ ಕರ್ನೆಲಿಯೊ, ಮುರಳಿ ಶೆಟ್ಟಿ, ನವೀನ್‍ಚಂದ್ರ ಜೆ. ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಹರೀಶ್‍ ಕಿಣಿ, ಅಣ್ಣಯ್ಯ ಶೇರಿಗಾರ್, ಬಿ. ನರಸಿಂಹ ಮೂರ್ತಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕುಶಲ್ ಶೆಟ್ಟಿ, ಬಿಪಿನ್‍ ಚಂದ್ರ ಪಾಲ್ ನಕ್ರೆ, ದೀಪಕ್‍ ಕೋಟ್ಯಾನ್, ಕೀರ್ತಿ ಶೆಟ್ಟಿ, ಪ್ರಶಾಂತ್‍ ಜತ್ತನ್ನ, ನವೀನ್‍ಚಂದ್ರ ಸುವರ್ಣ, ಸದಾಶಿವ ದೇವಾಡಿಗ, ಹರಿಪ್ರಸಾದ್ ಶೆಟ್ಟಿ, ಪ್ರದೀಪ್‍ ಕುಮಾರ್ ಶೆಟ್ಟಿ, ದಿನಕರ್ ಹೇರೂರು, ಶಂಕರ್‍ಕುಂದರ್, ಇಸ್ಮಾಯಿಲ್‍ ಆತ್ರಾಡಿ, ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ, ಶಶಿಧರ ಶೆಟ್ಟಿ ಎಲ್ಲೂರು, ಹರೀಶ್ ಶೆಟ್ಟಿ ಪಾಂಗಾಳ, ಸಂಕಪ್ಪ ಎ., ವಿಶ್ವಾಸ್‍ ಅಮೀನ್, ಸೌರಭ್ ಬಲ್ಲಾಳ್, ರಮೇಶ್‍ ಕಾಂಚನ್, ಯತೀಶ್‍ ಕರ್ಕೆರಾ, ಜನಾರ್ಧನ್ ಭಂಡಾರ್ಕರ್, ಜ್ಯೋತಿ ಹೆಬ್ಬಾರ್, ರೋಶನಿ ಒಲಿವೆರಾ, ಗೀತಾ ವಾಗ್ಲೆ, ಡಾ. ಸುನೀತಾ ಶೆಟ್ಟಿ, ಶೇಖರ್ ಕೆ.ಕೋಟ್ಯಾನ್ ಉಪಸ್ಥಿತರಿದ್ದರು. ಇದನ್ನೂ ಓದಿ: BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? 1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? 'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com

Advertisement
Advertisement
Recent Posts
Advertisement