Advertisement

ಆಸ್ಕರ್ ಫರ್ನಾಂಡೀಸ್ ಆರೋಗ್ಯ ಸ್ಥಿರ - ವದಂತಿ ಹರಡದಿರಿ: ಅಶೋಕ್ ಕುಮಾರ್ ಕೊಡವೂರು.

Advertisement

ಮಂಗಳೂರಿನ ಓಸ್ವಾಲ್ಡ್ ಫರ್ನಾಂಡೀಸ್ ಎಂಬುವವರು ತೀವ್ರ ಅನಾರೋಗ್ಯದಿಂದ ಮೃತರಾಗಿರುವ ಕುರಿತು ವರದಿಯಾಗಿದೆ ಆದರೆ ಕೆಲವರು ಅದನ್ನು ತಪ್ಪಾಗಿ ಅರ್ಥೈಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ರಾಜ್ಯ ಸಭಾ ಸದಸ್ಯ ಆಸ್ಕರ್ ಫರ್ನಾಂಡೀಸ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದುದಾಗಿದೆ. ಅಂತಹ ಕಪೋಲಕಲ್ಪಿತ ಸುದ್ದಿಯನ್ನು ಯಾರೂ ಹಂಚಿಕೊಳ್ಳಬಾರದು ಅಲ್ಲದೇ ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯ ಸ್ಥಿರವಾಗಿದೆ.

ಅವರು ಗುಣಮುಖರಾಗಿ ಬರುವ ಕುರಿತು ನಾವು ಆಶಾವಾದಿಯಾಗಿದ್ದೇವೆ ಎಂಬುದಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.





ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು. ಧನ್ಯವಾದಗಳು
Independent journalism can’t be independent without your support, contribute by clicking below.




  • Advertisement
    Advertisement
    Recent Posts
    Advertisement