Advertisement

ಸಂಪುಟ ಪುನಾರಚನೆಗೆ ಸಚಿವರ ಕಾರ್ಯನಿರ್ವಹಣೆಯೇ ಮಾನದಂಡವಾಗಿದ್ದರೆ ಈ ದೇಶದ ಸರ್ವನಾಶಕ್ಕೆ ಕಾರಣರಾಗಿರುವ ಪ್ರಧಾನಿ ಮೋದಿಯವರನ್ನೆ ಮೊದಲು ಕಿತ್ತುಹಾಕಬೇಕು.

Advertisement

ಸಂಪುಟ ಪುನಾರಚನೆಗೆ ಸಚಿವರ ಕಾರ್ಯನಿರ್ವಹಣೆಯೇ ಮಾನದಂಡವಾಗಿದ್ದರೆ ಮೊದಲು ನರೇಂದ್ರ ಮೋದಿಯವರನ್ನು ಪ್ರಧಾನಿ ಪಟ್ಟದಿಂದ ಕಿತ್ತುಹಾಕಬೇಕು. ನೋಟ್ ಬ್ಯಾನ್ ನಿಂದ ಹಿಡಿದು ಕೊರೊನಾ ನಿಯಂತ್ರಣದ ವರೆಗೆ ಈ ಸರ್ಕಾರ ವಿಫಲಗೊಂಡಿದ್ದರೆ ಅದಕ್ಕೆ ನೇರ ಹೊಣೆ ನರೇಂದ್ರಮೋದಿಯವರು. ಆಂತರಿಕ ಪ್ರಜಾಪ್ರಭುತ್ವವೇ ಇಲ್ಲದ ಏಕವ್ಯಕ್ತಿ ಪ್ರದರ್ಶನವಾಗಿರುವ ಕೇಂದ್ರ ಸಚಿವ ಸಂಪುಟದ ವಿಸ್ತರಣೆಗೆ ಯಾವ ಮಹತ್ವವೂ ಇಲ್ಲ. ಮೋದಿಯವರ ಸಂಪುಟದಲ್ಲಿ ಯಾರು ಸಚಿವರಾದರೂ ಅವರೆಲ್ಲರೂ ನಾಮ್ ಕಾವಸ್ತೆ, ಹಣಕಾಸು, ಆರೋಗ್ಯ, ಶಿಕ್ಷಣ,ವಿದೇಶಾಂಗ ಯಾವುದೇ ಖಾತೆ ಇರಲಿ, ಅವುಗಳಿಗೆ ಸಂಬಂಧಿಸಿದ ನೀತಿ ನಿರ್ಧಾರಗಳನ್ನು ಪ್ರಕಟಿಸುವುದು ಮತ್ತು ಅದರ ಬಗ್ಗೆ ಮಾತನಾಡುವುದು ನರೇಂದ್ರ ಮೋದಿಯವರೇ ಆಗಿರುವ ಕಾರಣ ಆ ಖಾತೆಗಳ ವೈಫಲ್ಯಕ್ಕೆ ಅವರೇ ಹೊಣೆ ಹೊರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ಕೊರೊನಾ ಕಾಲದಲ್ಲಿ ಹತ್ತಾರು ಬಾರಿ ಟಿವಿಗಳಲ್ಲಿ ಮೋದಿಯವರು ಕಾಣಿಸಿಕೊಂಡಿದ್ದಾರೆ. ಜಾಗಟೆ ಬಡಿದು,ದೀಪ ಹಚ್ಚಿ ಕೊರೊನಾ ವೈರಸ್ ಓಡಿಸಲು ಹೇಳಿದ ಮಹಾನುಭಾವ ಮೋದಿ. ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣಕ್ಕೆ ರಾಜ್ಯಗಳಿಗೆ ಹಣ ನೀಡದೆ ಸತಾಯಿಸಿದವರು, ಕಾರ್ಮಿಕರು ವಲಸೆ ಹೋಗುತ್ತಿರುವಾಗ ಕಣ್ಣುಮುಚ್ಚಿ ಕೂತವರು, ಕೊರೊನಾ ಸೋಂಕು ಹರಡುತ್ತಿರುವಾಗಲೇ ಚುನಾವಣಾ ಪ್ರಚಾರ ಸಭೆ ನಡೆಸಿದವರು, ವ್ಯಾಕ್ಸಿನ್ ಬಗ್ಗೆ ಸುಳ್ಳು ಹೇಳಿದವರು, ನಮ್ಮಲ್ಲಿ ವ್ಯಾಕ್ಸಿನ್ ಕೊಡದೆ ವಿದೇಶಕ್ಕೆ ರಫ್ತು ಮಾಡಿದವರು ನರೇಂದ್ರ ಮೋದಿ. ಈಗ ಕೊರೊನಾ ನಿಯಂತ್ರಣದಲ್ಲಿನ ವೈಫಲ್ಯಕ್ಕೆ ಯಾರೋ ಡಾ.ಹರ್ಷವರ್ಧನ್ ಎಂಬ ಆರೋಗ್ಯ ಸಚಿವರನ್ನು ಕಿತ್ತುಹಾಕಿದ್ದಾರಂತೆ. ನಿಜವಾಗಿ ಮೋದಿಯವರು ರಾಜೀನಾಮೆ ನೀಡಬೇಕು. ಹಿಂದಿನ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಸ್ವತ: ವೈದ್ಯರಾಗಿದ್ದರೆ, ಹೊಸ ಆರೋಗ್ಯ ಸಚಿವ ಮನಸೂಕ್ ಮಾಂಡವೀಯ ರಾಜಕೀಯ ಶಾಸ್ತ್ರದಲ್ಲಿ ಪದವೀದರ. ಕೋರೊನಾ ಕಾಲದಲ್ಲಿ ಆರೋಗ್ಯ ಖಾತೆಯಲ್ಲಿಯೇ ಕೈತುಂಬಾ ಕೆಲಸ ಇರುವಾಗ ಹೊಸ ಆರೋಗ್ಯ ಸಚಿವರಿಗೆ ಹೆಚ್ಚುವರಿಯಾಗಿ ರಾಸಾಯಾನಿಕ ಮತ್ತು ರಸಗೊಬ್ಬರ ಖಾತೆಯನ್ನು ನೀಡಲಾಗಿದೆ. ಇವರಿಂದ ಯಾವ ಸಾಧನೆಯನ್ನು ನಿರೀಕ್ಷಿಸಬಹುದು ಎಂದವರು ಪ್ರಶ್ನಿಸಿದ್ದಾರೆ. ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ಸಾಧನೆಯೇ ಮಾನದಂಡವಾಗಿದ್ದರೆ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಿತ್ತುಹಾಕಬೇಕಿತ್ತಲ್ವಾ? ಆರೋಗ್ಯ ಕ್ಷೇತ್ರಕ್ಕಿಂತಲೂ ಹೆಚ್ಚಿನ ವೈಫಲ್ಯ ಕಾಣುವುವುದು ಆರ್ಥಿಕ ಕ್ಷೇತ್ರದಲ್ಲಿ. ನೋಟ್ ಬ್ಯಾನ್, ಜಿಎಸ್ ಟಿ, ಕೊರೊನಾ ಪರಿಹಾರ ಹೀಗೆ ಹಣಕಾಸು ಖಾತೆಗೆ ಸಂಬಂಧಿಸಿದ ವೈಫಲ್ಯಗಳಿಂದಾಗಿಯೇ ದೇಶ ಇಂದಿನ ದುಸ್ಥಿತಿಗೆ ಬಂದಿದೆ. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅದೇ ಖಾತೆಯಲ್ಲಿ ಮುಂದುವರಿದಿದ್ದಾರೆ. ಬಹಳ ಮಂದಿ ಸಚಿವರನ್ನು ಕೈಬಿಟ್ಟಿರುವ ಸುದ್ದಿ ಕೇಳಿಯೇ ಅವರೆಲ್ಲ ಸಂಪುಟದಲ್ಲಿದ್ದರೆಂದು ದೇಶದ ಜನರಿಗೆ ಗೊತ್ತಾಗಿರುವುದು. ಈಗ ಹೊಸದಾಗಿ ಸೇರ್ಪಡೆಯಾದ ಸಚಿವರದ್ದೂ ಇದೇ ಕತೆ. ಇವರಲ್ಲಿ ಬಹಳಷ್ಟು ಮಂದಿ ಹೊಸಬರು. ದೇಶ ಎದುರಿಸುತ್ತಿರುವ ಇಂದಿನ ಸಂಕಷ್ಟದ ಕಾಲದಲ್ಲಿ ಈ ಹೊಸಬರನ್ನು ಕಟ್ಟಿಕೊಂಡು ಮೋದಿಯವರು ಏನು ಮಾಡುತ್ತಾರೋ ಗೊತ್ತಿಲ್ಲ. ಸಾಮಾನ್ಯವಾಗಿ ಅಸಮರ್ಥರು ಅಸಮರ್ಥರನ್ನೇ ಆಯ್ಕೆ ಮಾಡಿಕೊಂಡು ಜೊತೆಯಲ್ಲಿಟ್ಟುಕೊಳ್ತಾರೆ. ಹಾಗಿದೆ ಹೊಸ ಸಂಪುಟ ಎಂದವರು ಹೇಳಿದ್ದಾರೆ. ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ನರೇಂದ್ರ ಮೋದಿಯವರು ಮೊದಲು ಅಧಿಕಾರಕ್ಕೆ ಬಂದಾಗ ‘Minimum Government Maximum Governence’ ಎಂಬ ಘೋಷಣೆ ಕೂಗುತ್ತಿದ್ದರು. ಈಗಿನ ಸಚಿವ ಸಂಪುಟದಲ್ಲಿ 77 ಸದಸ್ಯರಿದ್ದಾರೆ. ಇದೇನಾ Minimum Government? ಹೇಳುವುದೊಂದು, ಮಾಡುವುದೊಂದು. ಇದಕ್ಕಾಗಿಯೇ ನಾನು ಮೋದಿಯವರ ಮನೆದೇವರೇ ಸುಳ್ಳು ಎಂದು ಹೇಳುತ್ತಿರುವುದು. ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೋದಿಯವರು ಸೋಷಿಯಲ್ ಎಂಜನಿಯರಿಂಗ್ ಮಾಡಿದ್ದಾರೆ, ಸಾಮಾಜಿಕ ನ್ಯಾಯವನ್ನು ಪಾಲಿಸಿದ್ದಾರೆ ಎಂದೆಲ್ಲ ವ್ಯಾಖ್ಯಾನಗಳು ಕೇಳಿ ಬರುತ್ತಿವೆ. ಕರ್ನಾಟಕದಿಂದ ಆರು ಮಂದಿ ಈಗ ಕೇಂದ್ರ ಸಚಿವರಾಗಿದ್ದಾರೆ. ಇವರಲ್ಲಿ ಒಬ್ಬರೇ ಒಬ್ಬರು ಹಿಂದುಳಿದ ಜಾತಿಗೆ ಸೇರಿದವರಿಲ್ಲ. ಮೂವರು ಬ್ರಾಹ್ಮಣರು, ಒಕ್ಕಲಿಗ, ಲಿಂಗಾಯತ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ತಲಾ ಒಬ್ಬರು ಸಚಿವರಾಗಿದ್ದಾರೆ. ಯಾವ ಜಾತಿಗೆ ಕೊಟ್ಟರೂ ನನ್ನ ಆಕ್ಷೇಪ ಇಲ್ಲ. ಅರ್ಧಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಸಮುದಾಯಗಳಿಗೆ ಪ್ರಾತಿನಿಧ್ಯ ನಿರಾಕರಿಸುವುದು ಯಾವ ಸೋಷಿಯಲ್ ಎಂಜನಿಯರಿಂಗ್? ಯಾವ ಸಾಮಾಜಿಕ ನ್ಯಾಯ? ಕರ್ನಾಟಕದಿಂದ ಸಚಿವರ ಆರಾಗಲಿ, ಹನ್ನೆರಡಾಗಲಿ ಅದರಿಂದ ರಾಜ್ಯಕ್ಕೆ ಏನೂ ಲಾಭವಾಗದು ಎನ್ನುವುದು ಈಗಾಗಲೇ ಸಾಬೀತಾಗಿದೆ. ಹೊಸಬರಲ್ಲಿ ಯಾರೂ ಸಂಪುಟದರ್ಜೆಯ ಸಚಿವರಿಲ್ಲ. ಮಹತ್ವದ ಖಾತೆಗಳೂ ಇಲ್ಲ. ಮಹತ್ವದ ಖಾತೆಗಳನ್ನು ಕೊಟ್ಟರೂ ಇವರಿಗೆ ನಿಭಾಯಿಸುವ ಸಾಮರ್ಥ್ಯವೂ ಇಲ್ಲ ಎಂದು ನರೇಂದ್ರ ಮೋದಿಯವರಿಗೆ ಗೊತ್ತಾಗಿರಬೇಕು. ಆದ್ದರಿಂದ ಈ ಸಂಪುಟ ವಿಸ್ತರಣೆ, ಪುನರ್ರಚನೆಯಿಂದ ರಾಜ್ಯಕ್ಕೆ ಯಾವ ಲಾಭವೂ ಇಲ್ಲ. ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರಧಾನಿ ಎದುರು ಬಾಯಿಬಿಡುವ ಶಕ್ತಿ ಇಲ್ಲ, 25 ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ. ಹೀಗಿರುವಾಗ ಹೊಸದಾಗಿ ಸಚಿವ ಖಾತೆಯ ಕಿರೀಟ ಇಟ್ಟುಕೊಂಡು ಇವರೇನು ಮಾಡಬಹುದು ಎಂದವರು ಪ್ರಶ್ನಿಸಿದ್ದಾರೆ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement