ಕೋವಿಡ್ ನಿರ್ವಹಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸೇವೆ ಮಹತ್ವದ್ದಾಗಿದೆ. ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು, ನಿಸ್ವಾರ್ಥ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕೋವಿಡ್ಗೆ ಅಂಜಿ ಆಡಳಿತರೂಢ ಜನಪ್ರತಿನಿಧಿಗಳು ಮನೆಯಲ್ಲಿಯೇ ಕ್ವಾರಂಟೈನ್ ಆಗಿರುವ ಕಾಲದಲ್ಲೂ ಪಕ್ಷದ ಮುಖಂಡರು, ಕಾರ್ಯಕರ್ತರು ಕೋವಿಡ್ ಜಾಗೃತಿ ಮೂಡಿಸುವ ಜೊತೆಗೆ ಆರ್ಥಿಕ ಹಾಗೂ ಅಗತ್ಯ ಸಹಾಯ ಮಾಡುವ ಮೂಲಕ ಸಾರ್ಥಕ ಸೇವೆ ಸಲ್ಲಿಸಿರುವುದು ಪ್ರಶಂಸನೀಯ. ಕೋವಿಡ್ ಎರಡನೇ ಅಲೆಯನ್ನು ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಂಪೂರ್ಣ ವಿಫಲಗೊಂಡಿವೆ. ಇಚ್ಚಾಶಕ್ತಿಯ ಕೊರತೆಯಿಂದ ಪೂರ್ವ ತಯಾರಿ ಇಲ್ಲದೆ ಸಮಯಕ್ಕೆ ಸರಿಯಾಗಿ ಔಷಧಿ, ವೆಂಟಿಲೇಟರ್, ಬೆಡ್ಗಳ ಕೊರತೆಯಿಂದ ಕೋವಿಡ್ಗೆ ಹಲವಾರು ಜನರು ಬಲಿಯಾಗಿದ್ದಾರೆ. ಸರಕಾರವು ಸಾವಿನ ನಿಖರವಾದ ಸಂಖ್ಯೆ ನೀಡದೆ ಮುಚ್ಚಿಡುತ್ತಿದೆ. ಕಾರ್ಯಕರ್ತರೊಂದಿಗೆ ನಾಗರಿಕರು ಹಾಗೂ ಜಿಲ್ಲೆಯ ಧಾರ್ಮಿಕ ಕೇಂದ್ರಗಳು, ಜನರ ಸಂಕಷ್ಟಗಳಿಗೆ ಸ್ಪಂದಿಸಿರುವುದನ್ನು ಪಕ್ಷವು ಸ್ಮರಿಸಿಕೊಳ್ಳುತ್ತದೆ. ಕೊಡವೂರಿನ ಕಲ್ಮತ್ ಮಸೀದಿಗೆ ಗಜೆಟ್ ನೋಟಿಫಿಕೇಶನ್ ಆದ ಸ್ಥಳವನ್ನು ಜಿಲ್ಲಾಡಳಿತ ಹಿಂಪಡೆದ ಪ್ರಕ್ರಿಯೆ ಬಗ್ಗೆ ಕಂದಾಯ ಸಚಿವರು ಶೀಘ್ರ ನ್ಯಾಯ ದೊರಕಿಸಿ ಕೊಡಬೇಕಾಗಿ ಜಿಲ್ಲಾ ಕಾಂಗ್ರೆಸ್ ಆಗ್ರಹಿಸುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರುರವರು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡುತ್ತಾ ಹೇಳಿದರು.
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
ಮಾಜಿ ಸಚಿವರಾದ ಶ್ರೀ ವಿನಯ ಕುಮಾರ್ ಸೊರಕೆಯವರು ಮಾತನಾಡಿ ದೇಶದಲ್ಲಿ ಇಂದು ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸರಕಾರದ ಆಡಳಿತ ವೈಖರಿ ವಿರುದ್ಧ ಮಾತನಾಡಿದವರಿಗೆ ದೇಶದ್ರೋಹದ ಪ್ರಕರಣ ದಾಖಲಿಸಿ ಧ್ವನಿ ಅಡಗಿಸುವ ಯತ್ನ ನಡೆಯುತ್ತಿದೆ ಎಂದರು. ಯಡಮೊಗೆಯ ಉದಯ ಗಾಣಿಗರ ಹತ್ಯೆಯಾದಾಗ ಬಿಜೆಪಿ ಮುಖಂಡರು ಮೌನವಾಗಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಪ್ರಕರಣದ ತನಿಖೆಯ ಬಗ್ಗೆ ಬಿಜೆಪಿ ಮುಖಂಡರು ಸರಕಾರವನ್ನು ಯಾಕೆ ಆಗ್ರಹಿಸುತ್ತಿಲ್ಲ ? ಕಾಂಗ್ರೆಸ್ ಪಕ್ಷವು ಮುಂದಿನ ದಿನಗಳಲ್ಲಿ ಉದಯ ಗಾಣಿಗರ ಹತ್ಯೆಯನ್ನು ಖಂಡಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಸದ್ರಿ ಪ್ರಕರಣವನ್ನು ಸಿ.ಬಿ.ಐ.ಗೆ ಹಸ್ತಾಂತರಿಸುವಂತೆ ಹಾಗೂ ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ಪರಿಹಾರ ಧನ ನೀಡುವಂತೆ ಸರಕಾರವನ್ನು ಆಗ್ರಹಿಸಲಾಗುವುದು ಎಂದು ಹೇಳಿದರು.
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
ಮಾಜಿ ಶಾಸಕರಾದ ಶ್ರೀ ಗೋಪಾಲ ಪೂಜಾರಿಯವರು ಮಾತನಾಡುತ್ತಾ ಮುಂಬರುವ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಬಗ್ಗೆ ಈಗಿಂದೀಗಲೇ ತಯಾರಿ ನಡೆಸಬೇಕಾಗಿದೆ. ಸರಕಾರವು ಕ್ಷೇತ್ರ ವಿಂಗಡನೆಯನ್ನು ತಮ್ಮ ಅನುಕೂಲಕ್ಕೆ ಬೇಕಾದಂತೆ ಮಾಡಿಕೊಳ್ಳುವ ತಯಾರಿ ನಡೆಸುತ್ತಿದೆ. ಇದರ ಬಗ್ಗೆ ಪಕ್ಷದ ವತಿಯಿಂದ ಅಹವಾಲನ್ನು ಸರಕಾರಕ್ಕೆ ಮಂಡಿಸುವಂತೆ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
ಲಾಕ್ಡೌನ್ ಅವಧಿಯಲ್ಲಿ ನಿಧನರಾದ ಪಕ್ಷದ ಹಲವಾರು ಮುಖಂಡರಿಗೆ ಅವರ ಪಕ್ಷ ಸೇವೆಯನ್ನು ಸ್ಮರಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಸಹ ಸಂಚಾಲಕಿಯಾಗಿ ನಿಯುಕ್ತಿಗೊಂಡ ಶ್ರೀಮತಿ ರೋಶನಿ ಒಲಿವೆರಾ ಅವರನ್ನು ಅಭಿನಂದಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ಕುಶಲ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಳೆ ಧನ್ಯವಾದವಿತ್ತರು, ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಕಾರ್ಯಕ್ರಮ ನಿರ್ವಹಿಸಿದರು.
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
ಸಭೆಯಲ್ಲಿ ಕೆ.ಪಿ.ಸಿ.ಸಿ. ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೋ, ಮುಖಂಡರುಗಳಾದ ನವೀನ್ಚಂದ್ರ ಜೆ. ಶೆಟ್ಟಿ, ಬಿ. ನರಸಿಂಹ ಮೂರ್ತಿ, ಸರಸು ಡಿ. ಬಂಗೇರಾ, ರಾಜು ಪೂಜಾರಿ, ಪ್ರಖ್ಯಾತ್ ಶೆಟ್ಟಿ, ಬಿಪಿನ್ಚಂದ್ರಪಾಲ್ ನಕ್ರೆ, ಅಣ್ಣಯ್ಯ ಸೇರಿಗಾರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಬ್ಲಾಕ್ ಅಧ್ಯಕ್ಷರುಗಳಾದ ಶಂಕರ್ ಕೆ. ಕುಂದರ್, ಮಂಜುನಾಥ ಪೂಜಾರಿ, ಕೆ. ಸದಾಶಿವ ದೇವಾಡಿಗ, ಪ್ರದೀಪ್ ಕುಮಾರ್ ಶೆಟ್ಟಿ, ದಿನಕರ್ ಹೇರೂರು, ಸತೀಶ್ ಅಮೀನ್ ಪಡುಕೆರೆ, ನವೀನ್ಚಂದ್ರ ಸುವರ್ಣ, ಹರಿಪ್ರಸಾದ್ ಶೆಟ್ಟಿ, ಸುಧಾಕರ ಕೋಟ್ಯಾನ್, ನೀರೆ ಕೃಷ್ಣ ಶೆಟ್ಟಿ, ಶಬ್ಬೀರ್ ಅಹ್ಮದ್, ಹಬೀಬ್ ಅಲಿ, ಕೀರ್ತಿ ಶೆಟ್ಟಿ, ಹರೀಶ್ ಶೆಟ್ಟಿ ಪಾಂಗಾಳ, ಪ್ರಶಾಂತ್ ಜತ್ತನ್ನ, ಡಾ. ಸುನೀತಾ ಶೆಟ್ಟಿ, ಇಸ್ಮಾಯಿಲ್ ಆತ್ರಾಡಿ, ಬಾಲಕೃಷ್ಣ ಪೂಜಾರಿ, ನಿತ್ಯಾನಂದ ಶೆಟ್ಟಿ, ಸೌರಭ್ ಬಲ್ಲಾಳ್, ದೀಪಕ್ ಕೋಟ್ಯಾನ್, ಜನಾರ್ದನ ಭಂಡಾರ್ಕಾರ್, ಅಬ್ದುಲ್ ಅಜೀಜ್ ಹೆಜಮಾಡಿ, ವೈ. ಸುಕುಮಾರ್, ಅಖಿಲೇಶ್ ಕೋಟ್ಯಾನ್, ಸತೀಶ್ ಕಿಣಿ, ಎಂ.ಪಿ. ಮೊಯಿದಿನಬ್ಬ, ಚಂದ್ರಶೇಖರ ಶೆಟ್ಟಿ, ಡೆರಿಕ್ ಡಿ’ಸೋಜಾ, ಹರೀಶ್ಚಂದ್ರ ಕೊಡವೂರು, ರಾಘವ ದೇವಾಡಿಗ, ಕಿಶೋರ್ ಕುಮಾರ್ ಎರ್ಮಾಳ್, ವಿಲ್ಸನ್ ರೋಡ್ರಿಗಸ್, ಜಯರಾಮ್ ನಾಯ್ಕ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗ ಇದರ ಅಧ್ಯಕ್ಷ ರೋಶನ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?