ಕೋವಿಡ್ ನಿರ್ವಹಣೆಯ ವೇಳೆ ಕೇಂದ್ರ ಸರಕಾರದ ಕಾರ್ಯ ನಿರ್ವಹಣೆಯಲ್ಲಿ ಸ್ಪಷ್ಟತೆಯಿಲ್ಲದೆ ಎಲ್ಲಾ ಸಮಸ್ಯೆಗಳಿಗೂ ನ್ಯಾಯಾಲಯವೇ ಮಧ್ಯ ಪ್ರವೇಶಿಸಿ ಪರಿಹಾರ ಕಲ್ಪಿಸುವಂತಾಗಿದೆ.ಎರಡನೇ ಅಲೆಯಲ್ಲಿ ಸರಕಾರದ ನಿಲುವಿನಿಂದಾಗಿ ಆದ ಅವ್ಯವಸ್ಥೆಯನ್ನು ಸರಿ ದಾರಿಗೆ ತರಲು ಕೋರ್ಟ್ಗಳು ನೀಡಿದ ಆದೇಶಗಳು ಹೆಚ್ಚಿನ ಮಹತ್ವ ನೀಡಿವೆ ಎಂಬುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.
ಉಚಿತ ಲಸಿಕೆ ಹಂಚಿಕೆ ಬಗ್ಗೆ ಕೇಂದ್ರ ಮೀನ ಮೇಷ ಎಣಿಸಿದಾಗ ಸುಪ್ರೀಂಕೋರ್ಟು ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಿ ದೇಶದ ಸ್ಥಿತಿಯು ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತದೆ. ಆಮ್ಲಜನಕ ಪೂರೈಕೆ, ಅಗತ್ಯ ಔಷಧ ಹಾಗೂ ಲಸಿಕೆ ವಿತರಣೆ ವಿಧಾನಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಕೂಡಲೇ ಕೋರ್ಟಿನ ಮುಂದಿಡುವಂತೆ ಆದೇಶಿಸಿತ್ತು. ಸುಪ್ರೀಂಕೋರ್ಟ್ನಿಂದ ತರಾಟೆಗೆ ಒಳಗಾದ ಬಳಿಕವೇ ಕೇಂದ್ರ ಸರಕಾರತನ್ನ ನೀತಿಯನ್ನು ಬದಲಿಸಿಕೊಂಡು ಲಸಿಕೆ ಖರೀದಿಸಿ ವಿತರಿಸುವ ಹೇಳಿಕೆ ನೀಡಿದ್ದು. ಈಗ ಪುನರಪಿ ಕೋವಿಡ್ ಸೋಂಕಿನಿಂದ ತಮ್ಮವರನ್ನು ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಆರ್ಥಿಕ ನೆರವು ನೀಡಲು ಕೇಂದ್ರ ತನ್ನ ಅಸಹಾಯಕತೆ ವ್ಯಕ್ತಪಡಿಸಿದಾಗ ವಿಪತ್ತು ನಿರ್ವಹಣಾ ಕಾಯಿದೆ ಅಡಿ ಆರ್ಥಿಕ ಸಂಪನ್ಮೂಲಗಳಿಗೆ ಅನುಗುಣವಾಗಿ ಸಂತ್ರಸ್ತರಿಗೆ ಪರಿಹಾರ ನೀಡುವುದು ಕಡ್ಡಾಯ ಎಂದು ನ್ಯಾಯಾಲಯ ಆದೇಶಿಸಿದೆ.
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
ಈಗಾಗಲೇ 4 ಲಕ್ಷ ಜನರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಹಲವಾರು ಜನರು ತಮ್ಮ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ಕೆಲವರು ನಿರ್ಗತಿಕರಾಗಿದ್ದಾರೆ.ಈ ಸಂಕಟದ ಸಮಯದಲ್ಲಿ ಜನರ ನೆರವಿಗೆ ಧಾವಿಸಲೇ ಬೇಕಾದ ಅನಿವಾರ್ಯತೆ ಕೇಂದ್ರ ಸರಕಾರಕ್ಕೆಇದೆ. ಸರಕಾರವು ತನ್ನ ವ್ಯಾಪಾರಿ ಮನೋಭಾವವನ್ನು ಬಿಟ್ಟುಜನರ ಸಂಕಷ್ಟಕ್ಕೆ ಸ್ಪಂದಿಸಬೇಕಾಗಿದೆ.
ಸರಕಾರದ ಕೋವಿಡ್ ಕಾರ್ಯನಿರ್ವಹಣೆಯಲ್ಲಿ ಸ್ಪಷ್ಟತೆಯಿಲ್ಲದೆ ಪ್ರತಿಯೊಂದು ಹಂತದಲ್ಲಿಯೂ ಸುಪ್ರೀಂಕೋರ್ಟ್ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಕೇಂದ್ರ ಸರಕಾರ ತನ್ನ ಹೊಣೆಗಾರಿಕೆಯಿಂದ ಜಾರಿಕೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸುವ ಮನಸ್ಥಿತಿಯನ್ನೇ ಕಳೆದುಕೊಂಡ ಜನವಿರೋಧಿ ಸರಕಾರವಾಗಿದೆ ಎಂದುಉಡುಪಿ ಜಿಲ್ಲಾಕಾಂಗ್ರೆಸ್ ವಕ್ತಾರರಾದ ಭಾಸ್ಕರ್ ರಾವ್ ಕಿದಿಯೂರು ಕೋವಿಡ್ ಸಂತ್ರಸ್ತರಿಗೆ ಪರಿಹಾರಧನ ವಿತರಿಸಲು ಹಿಂದೇಟು ಹಾಕಿದ ಕೇಂದ್ರ ಸರಕಾರದ ನಿಲುವಿಗೆ ಪ್ರತಿಕ್ರಿಸಿದ್ದಾರೆ.