Advertisement

ಶಿವಮೊಗ್ಗ: ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮದ ಸ್ಥಳಕ್ಕೆ ಎನ್‌ಎಸ್‌ಯುಐ ಮುತ್ತಿಗೆ- ಗೋ ಬ್ಯಾಕ್ ಸೂಲಿಬೆಲೆ ಘೋಷಣೆ!

Advertisement

ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ, ಮಾಜಿ ಪ್ರಧಾನಿಗಳ ವಿರುದ್ಧ ಮತ್ತು ದೇಶದ ಇತಿಹಾಸವನ್ನು ಸದಾ ತಿರುಚಿ ಅಪಪ್ರಚಾರ ಮಾಡುವ ಮೂಲಕ ಫೇಸ್‌ಬುಕ್‌, ಟ್ವಿಟರ್, ವಾಟ್ಸ್ಯಾಪ್ ಮುಂತಾದ ಸಾಮಾಜಿಕ ಜಾಲತಾಣದಲ್ಲಿ ರಾಜ್ಯದಾದ್ಯಂತ ಪ್ರಗತಿಪರರಿಂದ ತೀವ್ರ ಆಕ್ರೋಶಕ್ಕೆ ಗುರಿಯಾಗಿರುವ ಹಾಗೂ ಯುವಕರಿಂದ #ಹೆಂಗ್_ಪುಂಗ್_ಲೀ ಬಿರುದು ಪಡೆದಿರುವ ಬಿಜೆಪಿ ಪರ ಬಾಷಣಕಾರ ಚಕ್ರವರ್ತಿ ಸೂಲಿಬೆಲೆಯ ಶಿವಮೊಗ್ಗದ ನೆಹರೂ ಸ್ಟೇಡಿಯಂ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಎನ್‌ಎಸ್‌ಯುಐ ಘಟಕ ಮುತ್ತಿಗೆ ಹಾಕಿ ಗೋ ಬ್ಯಾಕ್ ಸೂಲಿಬೆಲೆ ಘೋಷಣೆ ಕೂಗಿ ಪ್ರತಿಭಟಿಸಿತು. ಒಂದೆಡೆ ರಾಜ್ಯ ಸರ್ಕಾರ ಕೊರೊನಾ-2 ಹೆಸರಲ್ಲಿ ರಾಜ್ಯಾದಾದ್ಯಂತ ಮಾಸ್ಕ್ ಹಾಕದ ಆರೋಪದ ಮೇಲೆ ಗರಿಷ್ಠ ಐದು ಸಾವಿರದ ತನಕ ದಂಡ ವಿಧಿಸುತ್ತಿದ್ದರೆ ಮತ್ತೊಂದೆಡೆ ಈ ರೀತಿಯ ಇತಿಹಾಸ ತಿರುಚುವ ಕಾರ್ಯಕ್ರಮಕ್ಕೆ ಅನುಮತಿ ನೀಡುತ್ತಿರುವುದು ಖಂಡನೀಯ ಎಂದು ಎನ್‌ಎಸ್‌ಯುಐ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಬಾಲಾಜಿ ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಚೇತನ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಜಿ ಮಧುಸೂದನ್, ಎನ್‌ಎಸ್‌ಯುಐ ಜಿಲ್ಲಾ ಕಾರ್ಯಾಧ್ಯಕ್ಷ ರವಿಕುಮಾರ್ ಮತ್ತಿತರ ಜಿಲ್ಲಾ ಕಾಂಗ್ರೆಸ್ ಎನ್‌ಎಸ್‌ಯುಐ, ಯುವ ಕಾಂಗ್ರೆಸ್ ಘಟಕದ ಪದಾದಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು. __________________________________ ►► ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 ( ರೋಶನ್ ಶೆಟ್ಟಿ RG ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►► ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

Advertisement
Advertisement
Recent Posts
Advertisement