Advertisement

ಹೋರಾಟಗಾರ ಸ್ಟ್ಯಾನ್ ಸ್ವಾಮಿ ಸಾವು ನ್ಯಾಯವೇ? ಇದು ಕೇವಲ ಸಾವಲ್ಲ, ಇದು ಪ್ರಭುತ್ವವೆಸಗಿದ ಕೊಲೆ!

Advertisement

ಬರಹ: ಗ್ಲಾಡ್ಸನ್ ಅಲ್ಮೇಡಾ (ಲೇಖಕರು ಜನಪರ ಚಿಂತಕರು) ಇದು ಪ್ರಕೃತಿದತ್ತ ಸಾವಲ್ಲ, ಬದಲಾಗಿ ಪ್ರಭುತ್ವ ಮುಂದೆನಿಂತು ನಡೆಸಿದ ಕೊಲೆ. ಫಾ.ಸ್ಟ್ಯಾನ್ ಸ್ವಾಮಿ ಸತ್ತಿಲ್ಲ, ಅವರ ಕೊಲೆಯಾಗಿದೆ. ಆದಿವಾಸಿಗಳ ಹಕ್ಕುಗಳಿಗಾಗಿ ದಶಕಗಳ ಕಾಲ ಹೋರಾಡಿದ, ಪ್ರಭುತ್ವದ ವಿರುದ್ಧ ಸಿಡಿದೆದ್ದ ಸ್ಟ್ಯಾನ್ ಸ್ವಾಮಿ ಕೊನೆಗೂ ಅದೇ ಪ್ರಭುತ್ವದ ಅಹಂಕಾರ, ದರ್ಪಕ್ಕೆ ಬಲಿಯಾದರು. (ದೇಶದ ಪ್ರಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ರಚಿಸಿದ್ದ ಸ್ಟ್ಯಾನ್ ಸ್ವಾಮಿ ಬಂಧನ ಕುರಿತಾದ ಒಂದು ವ್ಯಂಗ್ಯಚಿತ್ರ.) ►►ಇದನ್ನೂ ಓದಿ: ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ಅವರ ಮೇಲೆ ಅತೀ ಕಠಿಣ UAPA ಕಾಯಿದೆಯಡಿ ಕೇಸ್ ಹಾಕಲಾಗಿತ್ತು. ಹೋರಾಟಗಾರರನ್ನು ಭಯೋತ್ಪಾದಕರೆಂದು ಪರಿಗಣಿಸಿ ಜೈಲಿಗಟ್ಟಲಾಯಿತು. ತನ್ನ ನಡುಗುವ ಕೈಗಳಿಂದ ಗ್ಲಾಸ್ ಹಿಡಿದು ನೀರೂ ಕುಡಿಯಲು ಆಗುತ್ತಿಲ್ಲ, ಆದ್ದರಿಂದ ತನಗೊಂದು ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದು ಅವರು ಕೋರ್ಟ್ ಮೊರೆ ಹೋಗಬೇಕಾಯಿತು. ಅದನ್ನು ವಿಚಾರಣೆಗೆತ್ತಿಕೊಳ್ಳಲು ಇಪ್ಪತ್ತು ದಿನ ಬೇಕಾಯಿತು. ಕೋರ್ಟ್ ಅವರಿಗೆ ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದಾಗ ಎನ್‍ಐಎ ನಮ್ಮ ಬಳಿ ಅವುಗಳಿಲ್ಲ ಎಂದು ಹೇಳಿತು. ಕೊನೆಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ಸ್ಟ್ರಾ ಹಾಗೂ ಸಿಪ್ಪರ್ ಖರೀದಿಸಿ ಎನ್‍ಐಗೆ ಕಳುಹಿಸಿ ಅವರ ಮಾನಗಳೆದಾಗ ಸ್ಟ್ಯಾನ್ ಸ್ವಾಮಿಗೆ, ಬಂಧನವಾಗಿ 50 ದಿನಗಳ ಬಳಿಕ ಸಿಪ್ಪರ್ ಸಿಕ್ಕಿತು. ಕೇವಲ ಪ್ರಭುತ್ವ ಅಲ್ಲ ನಮ್ಮ ನ್ಯಾಯಾಂಗ ವ್ಯವಸ್ಥೆ ಕೂಡಾ ಈ ಕೊಲೆಗೆ ಜವಾಬ್ದಾರಿಯನ್ನು ಹೊರಬೇಕು. ಕಳೆದ ಆರೇಳು ತಿಂಗಳಲ್ಲಿ ಸ್ಟ್ಯಾನ್ ಸ್ವಾಮಿ ಅದೆಷ್ಟು ಬಾರಿ ಕೋರ್ಟ್ ಮೊರೆಹೋಗಿದ್ದಾರೋ? ಆದರೂ ಪ್ರತೀ ಬಾರಿ 'ತಾರೀಕ್ ಪೆ ತಾರೀಕ್, ತಾರೀಕ್ ಪೆ ತಾರೀಕ್' ಎಂದರೆ ಹೊರತು ನ್ಯಾಯ ಕೊಡಿಸಲಿಲ್ಲ. ನ್ಯಾಯಾಧೀಶರ ತಾರೀಕು ಬರಲೇ ಇಲ್ಲ ಆದರೆ ಯಮರಾಯನ ತಾರೀಕು ಇವತ್ತು ಬಂದುಬಿಟ್ಟಿತು. ►►ಇದನ್ನೂ ಓದಿ: ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ಸ್ಟ್ಯಾನ್ ಸ್ವಾಮಿಗೆ ಪ್ರಭುತ್ವ, ಅಸಮಾನತೆ, ಅನ್ಯಾಯದ ವಿರುದ್ಧ ಹೋರಾಟ ಹೊಸತಲ್ಲ. ಅವರು ಕೇವಲ ಪ್ರಸಕ್ತ ಸರಕಾರದವಧಿಯಲ್ಲಿ ಮಾತ್ರ ಪ್ರತಿಭಟಿಸಿದ್ದಲ್ಲ, ಹೋರಾಡಿದ್ದಲ್ಲ. ದಶಕಗಳಿಂದ ಹೋರಾಟದ ಹಾದಿಯಲ್ಲಿಯೇ ಇದ್ದರವರು. ಆದಿವಾಸಿಗಳ ಪರ ಸದಾಕಾಲ ದನಿಯೆತ್ತಿದ್ದವರು. ಸಂವಿಧಾನ ಐದನೇ ಪರಿಚ್ಚೇಧವನ್ನು ಅನುಷ್ಟಾನ ಮಾಡದ್ದರ ವಿರುದ್ಧ ಅವರ ಹೋರಾಟ ಇವತ್ತು ನಿನ್ನೆಯದಲ್ಲ. ಬರೀ ಭಾರತ ಸರ್ಕಾರವೇಕೆ, ತಮ್ಮ ವಿದ್ಯಾರ್ಥಿ ದೆಸೆಯಲ್ಲಿ ಫಿಲಿಪೈನ್ಸ್ ದೇಶದಲ್ಲಿ ತತ್ವಶಾಶ್ತ್ರ ಹಾಗೂ ಸಮಾಜಶಾಸ್ತ್ರವನ್ನು ಅಧ್ಯಯನ ಮಾಡುತ್ತಿದ್ದಾಗ, ಅಲ್ಲಿನ ಸ್ಥಳೀಯ ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳನ್ನು ಹಮ್ಮಿಕೊಂಡು, ಪ್ರಭುತ್ವದ ವಿರುದ್ಧ ದನಿಯೆತ್ತಿದ್ದ ಧೀಮಂತ ವ್ಯಕ್ತಿ ಅವರು. ಇಂಥ ಅಪ್ರತಿಮ ಚೇತನ ಇನ್ನಿಲ್ಲ. ಸ್ಟ್ಯಾನ್ ಸ್ವಾಮಿಯ ಈ ಫೊಟೋ ನೋಡಿ. ಹಿಟ್ಲರನ ಗ್ಯಾಸ್ ಚೇಂಬರ್‌ಗಳ ಕಥನ ಹೇಗೆ ಇವತ್ತಿಗೂ ವಿಶ್ವವನ್ನು ಕಾಡುತ್ತಿದೆಯೋ, ಹಾಗೆಯೇ ಆಸ್ಪತ್ರೆಯ ಹಾಸಿಗೆಯ ಮೇಲಿರುವ ಎಂಬತ್ನಾಲ್ಕರ ಹರೆಯದ ಪಾರ್ಕಿನ್ಸನ್ ಪೀಡಿತ ಈ ಹೋರಾಟಗಾರನ ಕತೆ ಭವಿಷ್ಯದಲ್ಲಿ ನಮ್ಮ ದೇಶದ ಕರಾಳ ಇತಿಹಾಸ ಹಾಗೂ ಪ್ರಭುತ್ವದ ಅಹಂಕಾರವನ್ನು ಬಿಚ್ಚಿಡುವ ಸಾಧನವಾಗಲಿದೆ. ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬಂಧನದಲ್ಲಿರುವಾಗಲೇ ಕೋವಿಡ್‌ಗೆ ಒಳಗಾದರು. ಆದರೂ 84 ರ ಹರೆಯದ, ಪಾರ್ಕಿನ್ಸನ್ ಹಾಗೂ ಇತರೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿರುವ ಅವರನ್ನು ಸರ್ಕಾರ ಇನ್ನಿಲ್ಲದಂತೆ ಪೀಡಿಸಿತು. ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ಸ್ಟ್ಯಾನ್ ಸ್ವಾಮಿಯ ಜಾಗದಲ್ಲಿ ನಾಳೆ ನಾವಿರಲಿದ್ದೇವೆ. ಪ್ರಭುತ್ವದ ಕೋವಿಗಳಿಗೆ ಹಾಗೂ ಪ್ರಭುತ್ವದ ಸರಪಣಿಗಳಿಗೆ ವ್ಯಕ್ತಿ ಕಾಣಿಸುವುದಿಲ್ಲ, ಬದಲಾಗಿ ಪ್ರಭುತ್ವದ ವಿರುದ್ಧದ ದನಿ ಮಾತ್ರ ಕೇಳಿಸುತ್ತೆ. ಹಾಗಾಗೀ ಇವತ್ತ್ರು ಸ್ಟ್ಯಾನ್ ಸ್ವಾಮಿಯ ಕಾಲಿಗಿದ್ದ ಸರಪಣಿ ನಾಳೆ ನಮ್ಮಲ್ಲಿ ಯಾರೋಬ್ಬರ ಕಾಲಿಗೂ ಬೀಳಬಹುದು. ನಾವಾಗಿಯೇ ಇದನ್ನು ಆರಿಸಿರುವುದು, ನಾವೇ ಅದರ ಪರಿಣಾಮಗಳನ್ನು ಉಣಲಿದ್ದೇವೆ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement