Advertisement

ರಾಹುಲ್ ಗಾಂಧಿಯವರ ಟ್ವಿಟರ್ ಖಾತೆ ಬ್ಲಾಕ್: ವಿರೋಧಗಳನ್ನು ಹಣಿಯಲು ಐಟಿ, ಈಡಿ, ಸಿಬಿಐ, ಫೆಗಾಸಸ್ ಆಯ್ತು ಇದೀಗ ಎನ್‌ಸಿಪಿಸಿಆರ್ ಬಳಕೆ?

Advertisement

ಕೇಂದ್ರದ ಮೋದಿ ಸರ್ಕಾರ ಈ ತನಕ ಐ.ಟಿ, ಈ.ಡಿ, ಸಿಬಿಐ, ಫೆಗಾಸಸ್ ಮುಂತಾದವುಗಳ ಮೂಲಕ ಮಾತ್ರವೇ ತನ್ನ ಸರ್ಕಾರದ ಜನ ವಿರೋಧಿ, ಸರ್ವಾಧಿಕಾರಿ ನೀತಿಗಳನ್ನು ವಿರೋಧಿಸಿದವರನ್ನು ಹಣಿಯುತ್ತಿತ್ತು. ಇದೀಗ ಅವುಗಳ ಸರಣಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ' (ಎನ್‌ಸಿಪಿಸಿಆರ್) ಸೇರ್ಪಡೆಗೊಂಡಿದೆಯೇ ಎಂಬ ಅನುಮಾನ ಹುಟ್ಟಿಕೊಂಡಿದೆ. ಹಾಗೆಯೇ ಎನ್‌ಸಿಪಿಸಿಆರ್ ಇರುವುದು ಮಕ್ಕಳ ಹಕ್ಕುಗಳ ರಕ್ಷಣೆಗಾಗಿಯೋ ಅಥವಾ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಹೋರಾಡುವವರಿಗೆ ಶಿಕ್ಷೆ ನೀಡಲೋ? ಎಂಬ ಪ್ರಶ್ನೆ ಕೂಡ ಹುಟ್ಟಿಕೊಂಡಿದೆ. ಈ ಮೇಲಿನ ಅನುಮಾನ ಹಾಗೂ ಪ್ರಶ್ನೆ ಹುಟ್ಟಿಕೊಳ್ಳಲು ಕಾರಣವೇನೆಂದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇತ್ತೀಚೆಗೆ ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಎಂಟರ ಹರೆಯದ ಎಳೆ ಬಾಲಕಿಯ ಹೆತ್ತವರನ್ನು ಭೇಟಿಯಾಗಿ ಸಾಂತ್ವಾನ ಹೇಳಿದ್ದರು. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ತನಕ ಸಂತ್ರಸ್ತ ಕುಟುಂಬಕ್ಕೆ ಬೆಂಗಾವಲಾಗಿ ನಿಲ್ಲುವುದಾಗಿ ತಿಳಿಸಿದ್ದರು. ಆ ಕುರಿತಾಗಿ ಸಂತ್ರಸ್ಥ ಬಾಲಕಿಯ ಹೆತ್ತವರ ಜೊತೆಗಿನ ವಿಡಿಯೋ ಒಂದನ್ನು ರಾಹುಲ್ ಗಾಂಧಿಯವರು ತನ್ನ ಟ್ವಿಟರ್, ಇನ್‌ಸ್ಟಾಗ್ರಾಂ ಮುಂತಾದ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪ್ರಕಟಿಸಿದ್ದರು. ಅದು ಲಕ್ಷಾಂತರ ಸಂಖ್ಯೆಯಲ್ಲಿ ಶೇರ್ ಆಗುವ ಮೂಲಕ ವೈರಲ್ ಆಗಿ ದೇಶದಾದ್ಯಂತ ಜನರು ಆಕ್ರೋಶಿತರಾಗಿದ್ದರು. ಈ ನಡುವೆ 'ಸಂತ್ರಸ್ತ ಬಾಲಕಿಯ ಗೌಪ್ಯತೆ ಕಾನೂನು' ಪ್ರಕಾರ ಆಕೆಯ ಹೆತ್ತವರ ಜೊತೆಗಿನ ವಿಡಿಯೋ ಹಂಚಿಕೊಂಡಿದ್ದು ತಪ್ಪು, ವಿಡಿಯೋದಲ್ಲಿ ಬಾಲಕಿಯ ತಂದೆ, ತಾಯಿ ಮುಖ ಸ್ಪಷ್ಟವಾಗಿ ಕಾಣಿಸುವುದರಿಂದ ದುರ್ದೈವಿಯ ಕುಟುಂಬದ ಗುರುತನ್ನು ಹಂಚಿಕೊಂಡಂತಾಗಿದೆ. ಇದು ಕಾನೂನು ಬಾಹಿರವಾಗಿರುವುದರಿಂದ ರಾಹುಲ್ ಗಾಂಧಿಯವರ ನಿರ್ಧಿಷ್ಟ ಖಾತೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎನ್‌ಸಿಪಿಸಿಆರ್ ಸಂಸ್ಥೆ, ಟ್ವಿಟರ್ ಸಂಸ್ಥೆಗೆ ದೂರು ನೀಡಿತ್ತು. ಅದೇ ಪ್ರಕಾರವಾಗಿ ಏಕ ಪಕ್ಷೀಯವಾಗಿ ಯಾವುದೇ ಮುನ್ಸೂಚನೆ ಅಥವಾ ಎಚ್ಚರಿಕೆ ನೀಡಿ ವಿಡಿಯೋ ವನ್ನು ಡಿಲಿಟ್ ಮಾಡುವಂತೆ ಸೂಚಿಸದೆ, ಟ್ವಿಟರ್ ಸಂಸ್ಥೆ ರಾಹುಲ್ ರವರ ಟ್ವಿಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿತ್ತು. ಇದೀಗ ಎನ್‌ಸಿಪಿಸಿಆರ್ ಸಂಸ್ಥೆ ರಾಹುಲ್ ರ ಇನ್‌ಸ್ಟಾಗ್ರಾಂ ಖಾತೆಯನ್ನು ಕೂಡ ನಿಷ್ಕ್ರಿಯ ಗೊಳಿಸುವಂತೆ ಇನ್‌ಸ್ಟಾಗ್ರಾಂ ನ ಮಾತೃಸಂಸ್ಥೆ ಫೇಸ್‌ಬುಕ್‌ ಗೆ ಮನವಿ ಮಾಡಿದೆ. ಈ ತನಕ ಮಕ್ಕಳ ಹಕ್ಕುಗಳ ರಕ್ಷಣೆಗಾಗಿಯೇ ಇದೆ ಎಂದು ನಂಬಲಾಗಿರುವ 'ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ' (ಎನ್‌ಸಿಪಿಸಿಆರ್) ವು ಅದೇ ಸಂತ್ರಸ್ತ ಬಾಲಕಿಯ ಹೆತ್ತವರ ಪರ ನಿಂತಿರುವ ರಾಹುಲ್ ಜೊತೆ ಕೈಜೋಡಿಸಿದ್ದರೆ ಬಹುಶಃ ಆ ಸಂತ್ರಸ್ತರಿಗೆ ಇಷ್ಟರೊಳಗೆ ನ್ಯಾಯ ದೊರಕುತ್ತಿತ್ತೋ ಏನೋ? ಆದರೆ ಆ ಸಂಸ್ಥೆ ಹಾಗೆ ಮಾಡದೆ ಆರೋಪಿಗಳ ಪರ ಯಾ ಆಳುವ ವರ್ಗದ ಪರ ನಿಂತಿರುವುದು ಈ ಮೇಲಿನ ಅನುಮಾನ ಮೂಡಲು ಕಾರಣವಾಗಿದೆ. ಕಳೆದ ವರ್ಷ ಯೋಗಿ ಆದಿತ್ಯನಾಥ್ ಆಡಳಿತದ ಉತ್ತರಪ್ರದೇಶದ ಹತ್ರಾಸ್ ನಲ್ಲಿ ಮೇಲ್ಜಾತಿಯ ದುಷ್ಟರ್ಮಿಗಳಿಂದ ಅತ್ಯಾಚಾರಕ್ಕೊಳಗಾದ ಕೆಳಜಾತಿಯ ಯುವತಿಯ ಶವವನ್ನು ಆಕೆಯ ಹೆತ್ತವರಿಗೆ ಹಸ್ತಾಂತರಿಸದೆ ಸಾಕ್ಷ್ಯನಾಶಗೊಳಿಸುವ ಕಾರಣಕ್ಕಾಗಿ ರಾತ್ರೋರಾತ್ರಿ ಅಲ್ಲಿನ ಆಡಳಿತ ಸುಟ್ಟುಹಾಕಿತ್ತು. ಆ ಸಮಯದಲ್ಲಿ ಆಕೆಯ ಹೆತ್ತವರನ್ನು ಭೇಟಿಯಾಗಲು ತೆರಳಿದ ರಾಹುಲ್ ಗಾಂಧಿಯವರ ಮೇಲೆ ತಡೆಯಲು ಮುಂದಾದ ಪೋಲಿಸ್ ಅಧಿಕಾರಿಯೊಬ್ಬ ಅವರನ್ನು ತಳ್ಳಿದ ಪರಿಣಾಮವಾಗಿ ರಾಹುಲ್ ಗಾಂಧಿಯವರು ನೆಲಕ್ಕುರುಳಿದ್ದರು. ಈ ಘಟನೆಯನ್ನು ಕಾಕತಾಳೀಯ ಎಂಬಂತೆ ಈ ಕ್ಷಣದಲ್ಲಿ ಮತ್ತೊಮ್ಮೆ ನೆನಪಿಸಿಕೊಳ್ಳ ಬಹುದಾಗಿದೆ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement