Advertisement

ಕೊರೊನಾ ವಿಪತ್ತಿನಿಂದ ಕರ್ನಾಟಕದಲ್ಲಿ ಮೃತಪಟ್ಟವರ ಸಂಖ್ಯೆ 4.5 ಲಕ್ಷ. ದೇಶದಲ್ಲಿ 50 ಲಕ್ಷ ಜನ: ಅರವಿಂದ ಸುಬ್ರಹ್ಮಣ್ಯಂ ಹಾಗೂ ಜೇಕಬ್ ಸಮಿತಿ ವರದಿ.

Advertisement

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ರೂ. 1 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಕೊರೊನಾದಿಂದ ಮೃತಪಟ್ಟ ಒಂದು ಕುಟುಂಬಕ್ಕೂ ಕರ್ನಾಟಕದ ಬಿಜೆಪಿ ಸರ್ಕಾರ ಇಲ್ಲಿಯ ವರೆಗೆ ಪರಿಹಾರ ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬಿಪಿಎಲ್ ಕುಟುಂಬದ ದುಡಿಯುವ ಸದಸ್ಯ ಕೊರೊನಾದಿಂದ ಸಾವಿಗೀಡಾದಲ್ಲಿ ಮತ್ತು ಒಂದು ಕುಟುಂಬದ ಒಬ್ಬ ಮೃತ ವ್ಯಕ್ತಿಗೆ ಮಾತ್ರ ಪರಿಹಾರ ನೀಡುವುದಾಗಿ ಕರ್ನಾಟಕದ ಬಿಜೆಪಿ ಸರ್ಕಾರ ಹೇಳಿದೆ. ಇದು ಅವೈಜ್ಞಾನಿಕ ಮತ್ತು ಅಮಾನವೀಯವಾದ ನಿಯಮ. ಒಂದು ಕುಟುಂಬದಲ್ಲಿ ಎಷ್ಟು ಮಂದಿಯಾದರೂ ಸಾವಿಗೀಡಾಗಿರಲಿ, ಮಾನವೀಯ ನೆಲೆಯಲ್ಲಿ ಸತ್ತವರಿಗೆಲ್ಲರಿಗೂ ತಲಾ ರೂ.5 ಲಕ್ಷ ಪರಿಹಾರ ನೀಡಬೇಕು ಮತ್ತು ಈ ಕೆಲಸ ಅತ್ಯಂತ ತುರ್ತಾಗಿ ಆಗಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದವರು ಹೇಳಿದ್ದಾರೆ. ರಾಜ್ಯ ಸರ್ಕಾರ ನೀಡಿರುವ ಕೊರೊನಾ ಸಾವಿನ ಸಂಖ್ಯೆ ಸತ್ಯಕ್ಕೆ ದೂರವಾದುದ್ದು. ಆರೋಗ್ಯ ಇಲಾಖೆ ಪ್ರಕಾರ ಕರ್ನಾಟಕದಲ್ಲಿ 37,603 ಜನ ಮಾತ್ರವೇ ಕೊರೊನಾದಿಂದ ಸಾವಿಗೀಡಾಗಿದ್ದಾರೆ. ಆದರೆ ಮೂರುವರೆಯಿಂದ ನಾಲ್ಕು ಲಕ್ಷ ಮಂದಿ ಸತ್ತಿದ್ದಾರೆ ಎಂದು ಅರವಿಂದ ಸುಬ್ರಹ್ಮಣ್ಯಂ ಹಾಗೂ ಜೇಕಬ್ ಜಾ ಅವರ ವರದಿ ಹೇಳಿದೆ. ದೇಶದಲ್ಲಿ ಈ ವರೆಗೆ 4.5 ಲಕ್ಷ ಜನ ಕೊರೊನಾದಿಂದ ಸಾವಿಗೀಡಾಗಿದ್ದಾರೆ ಎಂದು ಕೇಂದ್ರದ ಮೋದಿ ಸರ್ಕಾರ ಹೇಳಿದರೆ, ಅರವಿಂದ ಸುಬ್ರಹ್ಮಣ್ಯಂ ಹಾಗೂ ಜೇಕಬ್ ಅವರನ್ನು ಒಳಗೊಂಡ ಸಮಿತಿಯ ವರದಿ ದೇಶದಲ್ಲಿ ಕನಿಷ್ಟ 50 ಲಕ್ಷ ಮಂದಿ ಸತ್ತಿದ್ದಾರೆ ಎಂದು ಹೇಳಿದೆ. ಕೊರೊನಾದಿಂದ ಸಾವಿಗೀಡಾದವರ ಮನೆಗಳಿಗೆ ಭೇಟಿನೀಡಿ, ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಕೆಪಿಸಿಸಿ ಕೈಗೊಂಡಿತ್ತು. ಈ ಸಮೀಕ್ಷೆಯ ಪ್ರಕಾರ 3 ಲಕ್ಷದ 17 ಸಾವಿರ ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದವರು ಹೇಳಿದರು. ಕೇಂದ್ರ ಸಚಿವೆ ಭಾರತಿ ಪವಾರ್ ಅವರು ರಾಜ್ಯಸಭೆಯಲ್ಲಿ ನಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಅವರು ಕೇಳಿದ ಪ್ರಶ್ನೆ ಉತ್ತರಿಸುತ್ತ, ಆಕ್ಸಿಜನ್ ಕೊರತೆಯಿಂದ ದೇಶದಲ್ಲಿ ಯಾರೊಬ್ಬರೂ ಸತ್ತಿಲ್ಲ ಎಂದಿದ್ದಾರೆ. ಅವರನ್ನೊಮ್ಮೆ ಕರ್ನಾಟಕಕ್ಕೆ ಕರೆತಂದು ಸಾವಿಗೀಡಾದವರ ಕುಟುಂಬದವರ ಜೊತೆ ಮಾತನಾಡಿಸಬೇಕು. ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೆ 36 ಜನ ಸಾವಿಗೀಡಾದ ಘಟನೆ, ಯಡಿಯೂರಪ್ಪ ಅವರ ಮನೆಮುಂದೆಯೇ ಕೊರೊನಾ ಸೋಂಕಿತರೊಬ್ಬರು ಪ್ರಾಣ ಕಳೆದುಕೊಂಡದ್ದು ಸೇರಿದಂತೆ ಆಮ್ಲಜನಕ, ಹಾಸಿಗೆ, ವೆಂಟಲೇಟರ್ ಸಿಗದೆ ಸಾವಿಗೀಡಾದ ನೂರಾರು ಘಟನೆಗಳು ನಮ್ಮ ಕಣ್ಣೆದುರಿವೆ. ಆಕ್ಸಿಜನ್ ಕೊರತೆಯಿಂದ ಆಸ್ಪತ್ರೆಯ ಉಳಿದ ರೋಗಿಗಳ ಮೇಲಾದ ದುಷ್ಪರಿಣಾಮ, ಘಟನೆಯಲ್ಲಿ ಕನಿಷ್ಟ 36 ಜನ ಪ್ರಾಣ ಕಳೆದುಕೊಂಡಿರುವ ಬಗ್ಗೆ ಮಾಹಿತಿ ಸೇರಿದಂತೆ ವೇಣುಗೋಪಾಲ ಗೌಡ ನೇತೃತ್ವದ ನ್ಯಾಯಾಂಗ ಸಮಿತಿಯು ವರದಿಯನ್ನು ಮೇ 12 ರಂದು ಹೈಕೋರ್ಟ್ ಗೆ ಸಲ್ಲಿಸಿದೆ. ರಾಜ್ಯ ಸರ್ಕಾರ ಕೊರೊನಾ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗದ ಕಾರಣ ಮೂರುವರೆ ಲಕ್ಷ ಮಂದಿ ಸತ್ತಿದ್ದಾರೆ. ಅವರೆಲ್ಲರ ಕುಟುಂಬ ಪರಿಹಾರ ಪಡೆಯಲು ಅರ್ಹವಾಗಿದೆ, ಹಾಗಾಗಿ ಅವರೆಲ್ಲರಿಗೂ ರೂ. 5 ಲಕ್ಷ ಪರಿಹಾರ ನೀಡಬೇಕು ಎಂದವರು ಆಗ್ರಹಿಸಿದ್ದಾರೆ. ಮೇ 6 ರಂದು ರಾಜ್ಯಕ್ಕೆ ನಿತ್ಯ 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಸ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದರೂ, ಹೈಕೋರ್ಟ್ ತೀರ್ಪನ್ನೇ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು ಕೇಂದ್ರದ ಮೋದಿ ಸರ್ಕಾರಕ್ಕೆ ಆದ ಮುಖಭಂಗವಾಗಿದೆ. ರಾಜ್ಯ ಹೈಕೋರ್ಟ್ ತೀರ್ಪಿಗೆ ಮೊದಲು ರಾಜ್ಯಕ್ಕೆ ನಿತ್ಯ 1500 ಮೆಟ್ರಿಕ್ ಟನ್ ಆಕ್ಸಿಜನ್ ಅಗತ್ಯ ಇತ್ತು. ಆದರೆ ಲಭ್ಯವಿದ್ದ ಆಕ್ಸಿಜನ್ ಪ್ರಮಾಣ 600 ಮೆಟ್ರಿಕ್ ಟನ್ ಮಾತ್ರ. ಇಷ್ಟು ದೊಡ್ಡ ಪ್ರಮಾಣದ ಆಕ್ಸಿಜನ್ ಕೊರತೆಯಿದ್ದಾಗ ಜನ ಸಾಯದೆ ಇರ್ತಾರ? ರಾಜ್ಯದಲ್ಲಿ ಆಂಪೋಟೆರಿಸಿನ್ ಇಂಜೆಕ್ಷನ್ ಲಭ್ಯವಿಲ್ಲದ ವೇಳೆ ಬ್ಲಾಕ್ ಫಂಗಸ್ ಸೋಂಕಿಗೆ ತುತ್ತಾಗಿ ಸಹಸ್ರಾರು ಜನ ಸಾವಿಗೀಡಾದರು. ಇದಕ್ಕೆ ರಾಜ್ಯ ಸರ್ಕಾರವಲ್ಲದೆ ಇನ್ಯಾರು ಹೊಣೆ? ಎಂದವರು ಪ್ರಶ್ನಿಸಿದ್ದಾರೆ. ನ್ಯಾಯಾಂಗ ಸಮಿತಿಯು ನೀಡಿದ ವರದಿಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಲು ಅಲ್ಲಿನ ಜಿಲ್ಲಾಧಿಕಾರಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಕಾರಣ ಎಂದು ಹೇಳಿದೆ. ವರದಿ ಸಲ್ಲಿಕೆಯಾಗಿ 5 ತಿಂಗಳಾದರೂ ಈ ವರೆಗೆ ತಪ್ಪಿತಸ್ಥರ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಕ್ರಮ ಜರುಗಿಸಿಲ್ಲ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಾವಿಗೀಡಾದ 24 ಜನರ ಕುಟುಂಬಗಳಿಗೆ ಮಾತ್ರ ಕರ್ನಾಟಕದ ಬಿಜೆಪಿ ಸರ್ಕಾರ ಪರಿಹಾರದ ಹಣ ನೀಡಿದೆ. ನ್ಯಾಯಾಂಗ ಸಮಿತಿಯು ಆಕ್ಸಿಜನ್ ಸಿಗದೆ 36 ಜನ ಸತ್ತಿದ್ದಾರೆ ಎಂದು ಹೇಳಿದೆ. ಇನ್ನುಳಿದವರಿಗೆ ಪರಿಹಾರ ನೀಡೋದು ಯಾವಾಗ? ಸರ್ಕಾರದ ನಿಷ್ಕ್ರಿಯತೆಯನ್ನು ಮನಗಂಡು ನಮ್ಮ ಪಕ್ಷದ ಪರವಾಗಿ ಚಾಮರಾಜ ನಗರ ದುರಂತದಲ್ಲಿ ಮೃತಪಟ್ಟ ಎಲ್ಲಾ 36 ನತದೃಷ್ಟ ಕುಟುಂಬಗಳಿಗೂ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ನೀಡಿದ್ದೇವೆ. ಸರ್ಕಾರವೂ ಇನ್ನುಳಿದ 12 ಮೃತರ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಬೇಕು ಎಂದವರು ಆಗ್ರಹಿಸಿದ್ದಾರೆ. ದೇಶದ 60 ಕೋಟಿ ಜನರಿಗೆ ಕೊರೊನಾ ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರದ ಮೋದಿ ಸರ್ಕಾರ ಹೆಮ್ಮೆಯಿಂದ ಹೇಳಿಕೊಳ್ಳುತ್ತದೆ. ದೇಶದ ಜನಸಂಖ್ಯೆ 136 ಕೋಟಿ, ಇನ್ನೂ ಅರ್ಧದಷ್ಟು ಜನಸಂಖ್ಯೆಗೆ ಮೊದಲ ಡೋಸ್ ಸಿಕ್ಕಿಲ್ಲ ಎಂದರೆ ಅಷ್ಟೂ ಜನರಿಗೆ ಎರಡು ಡೋಸ್ ಸಿಗಲು ಇನ್ನೆಷ್ಟು ಕಾಲ ಬೇಕು? ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಎಂಬ ಅಂಗಸಂಸ್ಥೆಯಿದೆ. ಇದು ಕೇಂದ್ರದ ಮೋದಿ ಸರ್ಕಾರದ ನಿರ್ದೇಶನದಂತೆ ಮಾಹಿತಿ ಸಂಗ್ರಹಿಸಿದ್ದು, ಕೊರೊನಾ ಮೊದಲ ಅಲೆಯಲ್ಲಿ 1,32,409 ಮತ್ತು ಎರಡನೇ ಅಲೆಯಲ್ಲಿ 1,01,938 ಜನ ಸಾವಿಗೀಡಾಗಿದ್ದಾರೆ ಎಂದು ಹೇಳಿದೆ. ಆದರೆ ರಾಜ್ಯದ ಬಿಜೆಪಿ ಸರ್ಕಾರ ಈ ವರೆಗೆ ಕೊರೊನಾದಿಂದ ಸತ್ತವರ ಸಂಖ್ಯೆ 37,000 ಎಂದು ಹೇಳುತ್ತೆ. ಆರೋಗ್ಯ ಇಲಾಖೆಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ 2 ಲಕ್ಷದ 33 ಸಾವಿರ ಎಂದು ಹೇಳುತ್ತೆ. ಸತ್ಯ ಕಣ್ಣೆದುರೇ ಇದೆ ಇನ್ನೂ ನಾವು ಸರ್ಕಾರ ನೀಡುವ ಸುಳ್ಳು ಅಂಕಿ ಸಂಖ್ಯೆಗಳನ್ನೇ ನಂಬಬೇಕಾ ಎಂದವರು ಪ್ರಶ್ನಿಸಿದ್ದಾರೆ. ಕೊರೊನಾ ವಾರಿಯರ್ ಗಳು, ಅಂಗನವಾಡಿ ಕಾರ್ಯಕರ್ತರು, ಶಿಕ್ಷಕರು, ವೈದ್ಯರು ಹೀಗೆ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟ ಪ್ರತೀ ವ್ಯಕ್ತಿಯ ಕುಟುಂಬಕ್ಕೆ ಯಾವುದೇ ನಿಬಂಧನೆಗಳಿಲ್ಲದೆ ಕೂಡಲೇ ರಾಜ್ಯದ ಬಿಜೆಪಿ ಸರ್ಕಾರ ರೂ. 5 ಲಕ್ಷ ಪರಿಹಾರ ನೀಡಬೇಕು. 500 ml ಸಾಮರ್ಥ್ಯದ ಇಸ್ಟೇಲಿಯಂ ಇನ್ಸ್ಟಂಟ್ ಹ್ಯಾಂಡ್ ಸ್ಯಾನಿಟೈಸರ್ ಅನ್ನು ಅಯೋಡಿನ್ ಇಂಡಿಯಾ ಫಾರ್ಮಸುಟಿಕಲ್ ಕಂಪನಿಯಿಂದ 2,65,750 ಬಾಟಲಿಗಳನ್ನು ತಲಾ ರೂ. 88 ನೀಡಿ ಖರೀದಿಸಲಾಗಿದೆ. ಇದರ ಒಟ್ಟು ಮೌಲ್ಯ 2,33,86,000 ರೂಪಾಯಿ. ಅದೇ ರೀತಿ 5 ಲೀಟರ್ ನ 1,03,500 ಸ್ಯಾನಿಟೈಸರ್ ಕ್ಯಾನ್ ಗಳನ್ನು ತಲಾ ರೂ. 650 ನೀಡಿ ಖರೀದಿಸಲಾಗಿದೆ. ಇದರ ಒಟ್ಟು ಬೆಲೆ ರೂ. 6 ಕೋಟಿ 72 ಲಕ್ಷ 75 ಸಾವಿರ. ಎರಡೂ ಸೇರಿ ಒಟ್ಟು ರೂ. 9 ಕೋಟಿ 66 ಲಕ್ಷ ಆಗುತ್ತದೆ. ಈ ಸ್ಯಾನಿಟೈಸರ್ ಖರೀದಿಸಿದ ಸ್ವಲ್ಪ ದಿನಗಳಲ್ಲೇ ಬಣ್ಣ ಬದಲಿಸಿಕೊಂಡು ಕೊಳಚೆ ನೀರಿನಂತೆ ಕಾಣಿಸುತ್ತಿದೆ. ಇದನ್ನು ಡ್ರಗ್ ಕಂಟ್ರೋಲ್ ಇಲಾಖೆಗೆ ಪರೀಕ್ಷೆಗೆ ಕಳುಹಿಸಿದಾಗ ಇವು ಸ್ಟ್ಯಾಂಡರ್ಡ್ ಗುಣಮಟ್ಟದ ಸ್ಯಾನಿಟೈಸರ್ ಅಲ್ಲ ಎಂದು ಪರೀಕ್ಷಾ ವರದಿ ನೀಡಿದೆ. ಕೊರೊನಾ ಮೂರನೇ ಅಲೆ ಬರಲಿದೆ ಎಂಬ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ. ರಾಜ್ಯ ಸರ್ಕಾರ ಹಿಂದಿನ ತನ್ನ ತಪ್ಪುಗಳಿಂದ ಬುದ್ದಿ ಕಲಿತು, ಸಕಲ ಪೂರ್ವಸಿದ್ಧತೆಗಳನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಕೊರೊನಾಗೆ ಅಮಾಯಕ ಜನರು ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದವರು ಒತ್ತಾಯಿಸಿದ್ದಾರೆ‌. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:  ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement