ಮೃತ ಹರ್ಷನ ಮೇಲೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದವು ಎಂಬ ವಿಷಯ ತಿಳಿದುಬಂದಿದೆ. 2020ರಲ್ಲಿ ಇವರದ್ದೇ ಸರ್ಕಾರ ಆತನನ್ನು ಜೈಲಿಗಟ್ಟಿತ್ತು ಎಂದವರು ಹೇಳಿದ್ದಾರೆ.
ಶಿವಮೊಗ್ಗದ ಉಸ್ತುವಾರಿ ಸಚಿವ ನಾರಾಯನಗೌಡರೇ ವೈಯುಕ್ತಿಕ ಕಾರಣಗಳಿಗೆ ನಡೆದ ಕೊಲೆ ಎಂದಿದ್ದಾರೆ.
ಪೊಲೀಸರ ತನಿಖಾ ವರದಿಯೂ ಬಂದಿಲ್ಲ.
ಹೀಗಿರುವಾಗ ಈ ಪರಿಹಾರ ಹಣ ಕೊಟ್ಟಿದ್ದು ಏಕೆ? ಹೇಗೆ? ಎಂದವರು ಕೇಳಿದ್ದಾರೆ.
ನೆರೆ ಸಂತ್ರಸ್ತರಿಗೆ, ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸತಾಯಿಸುವ ಈ ಸರ್ಕಾರ ತಮ್ಮ ಪಕ್ಷದ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಹಣ ನೀಡಿರುವುದು ಆಶ್ಚರ್ಯಕರ! ಇಂತಹ ಉದಾರ ಮನಸಿದ್ದರೆ ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಏಕೆ ಕೊಡಲಿಲ್ಲ, ಬಜರಂಗದಳದವರಿಗೆ ಹತ್ಯೆಯಾದ ಸಮೀರ್ ಕುಟುಂಬಕ್ಕೆ ಏಕೆ ಕೊಡಲಿಲ್ಲ? ಮೃತರಾದ ಕೊಡಗಿನ ಯೋಧ ಕುಟುಂಬಕ್ಕೆ ಏಕೆ ಕೊಡಲಿಲ್ಲ? ಕನಿಷ್ಠ ಸಾಂತ್ವನವೂ ಹೇಳಲಿಲ್ಲವೇಕೆ? ಎಂದವರು ಆಕ್ರೋಶ ವ್ಯಕ್ತಪಡಿಸಿದರು.
ಅನಾರೋಗ್ಯ ಪೀಡಿತರಿಗೆ, ಬಡವರ ನೆರವಿಗೆ, ಯೋಧರ ಕುಟುಂಬಗಳಿಗೆ ಬಳಸಬಹುದಾದ 'ವಿವೇಚನೆ'ಯನ್ನು ತಮ್ಮ ಪಕ್ಷದ ಕೆಡರ್ ಒಬ್ಬನಿಗೆ ಬಳಸಿದ್ದು ಮುಖ್ಯಮಂತ್ರಿಗಳ ಯೋಚನೆ, ವಿವೇಚನೆ ಎಂತದ್ದು ಎಂದು ತಿಳಿಸುತ್ತದೆ. ಬಿಜೆಪಿ ಪಕ್ಷದ ಮೂಲಕ 25 ಲಕ್ಷವಲ್ಲ 25 ಕೋಟಿಯಾದರೂ ಕೊಡಲಿ, ಆದರೆ ಸರ್ಕಾರದ ಹಣ ದುರ್ಬಳಕೆಗೆ ಅಧಿಕಾರ ಕೊಟ್ಟವರು ಯಾರು? ಎಂದವರು ಪ್ರಶ್ನಿಸಿದ್ದಾರೆ.
ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ನೀಡಿದ ಸರ್ಕಾರ, ದೇಶದ ಗಡಿ ಕಾಯುತ್ತಾ ಮೃತನಾದ ಯೋಧ ಅಲ್ತಾಫ್ಗೆ ಎಷ್ಟು ನೀಡಿದೆ? ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರ್ಕಾರ? ಎಂದು ಹೇಳಿದರು.
ಗೋಡ್ಸೆ ಆರಾಧಕನಿಗೆ ಹಣ ನೀಡುವ ಮೂಲಕ ಗಾಂಧಿ ಹತ್ಯೆಯನ್ನು ಅನುಮೋದಿಸುತ್ತದೆಯೇ ಬಿಜೆಪಿ?
ಸಿಎಂ ಉತ್ತರಿಸಬೇಕು ಎಂದವರು ಆಗ್ರಹಿಸಿದ್ದಾರೆ.