Homepageರಾಜ್ಯಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ- ಸಚಿವ ಈಶ್ವರಪ್ಪ ಬಂಧನ ಯಾವಾಗ: ಬಿ.ಕೆ ಹರಿಪ್ರಸಾದ್ ಪ್ರಶ್ನೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ- ಸಚಿವ ಈಶ್ವರಪ್ಪ ಬಂಧನ ಯಾವಾಗ: ಬಿ.ಕೆ ಹರಿಪ್ರಸಾದ್ ಪ್ರಶ್ನೆ Advertisement ಕಾಂಟ್ರಾಕ್ಟರ್ ಸಂತೋಷ ಪಾಟೀಲ್ ಆತ್ಮಹತ್ಯೆಗೆ ಕಾರಣವಾಗಿರುವ ಸಚಿವ ಈಶ್ವರಪ್ಪನವರನ್ನ ಈ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಿ, ಬಂಧಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಒತ್ತಾಯಿಸಿದ್ದಾರೆ.ಹಿಂದೂ ವಾಹಿನಿ ರಾಷ್ಟ್ರೀಯ ಕಾರ್ಯದರ್ಶಿ, ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಇಂದು ಉಡುಪಿಯ ಖಾಸಗೀ ಹೊಟೇಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಆತ್ಮಹತ್ಯೆಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ನೇರ ಕಾರಣ ಎಂದು ಸಾಮಾಜಿಕ ಜಾಲತಾಣದಲ್ಲಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕೂಡಲೇ ಮೀನಾಮೇಷ ಮಾಡದೆ ಕೆ ಎಸ್ ಈಶ್ವರಪ್ಪನವರನ್ನ ಸಚಿವ ಸಂಪುಟದಿಂದ ವಜಾಗೊಳಿಸಿ, ಐಪಿಎಸ್ ಸೆಕ್ಸನ್ 302, 306 ಹಾಗೂ ಭ್ರಷ್ಟಾಚಾರದಡಿಯಲ್ಲಿ ಕೇಸ್ ದಾಖಲಿಸಿ ಬಂಧಿಸಬೇಕು ಎಂದವರು ಹೇಳಿದ್ದಾರೆ. ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಕೆಲವು ಮಾಧ್ಯಮ ಮಿತ್ರರಿಗೆ ಕಳುಹಿಸಿದ್ದಾರೆ ಎನ್ನಲಾದ ವಾಟ್ಸ್ಯಾಪ್ ಸ್ಕ್ರೀನ್ ಶಾಟ್. ಈಗಾಗಲೇ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರೇ ನನ್ನ ಸೋದರನ ಸಾವಿಗೆ ನೇರ ಕಾರಣ. ನನ್ನ ಸಹೋದರ 4 ಕೋಟಿ ರೂ. ಕೆಲಸ ಮಾಡಿದ್ದ. ಸಾಲ ಸೋಲ ಮಾಡಿ ನನ್ನ ತಮ್ಮ ಕಾಮಗಾರಿ ಮಾಡಿದ್ದ. ಅವನ ಬಳಿ 40% ಕಮಿಷನ್ ಕೇಳಿದ್ದ ಬಗ್ಗೆ ಸಾಕ್ಷಿ ಇದೆ. ನನ್ನ ತಮ್ಮನಿಗೆ ನ್ಯಾಯ ಕೊಡಿಸಿ ಎಂದು ಪ್ರಶಾಂತ್ ಕಣ್ಣೀರು ಹಾಕಿದ್ಧಾರೆ.ಕಾಮಗಾರಿಗಳಲ್ಲಿ ಸಚಿವರು ಕಮಿಷನ್ ಪಡೆಯುತ್ತಿದ್ದಾರೆ, ಕಿರುಕುಳ ಅನುಭವಿಸುತ್ತಿದ್ದೇನೆ ಎಂದು ಈ ಹಿಂದೆ ಸಂತೋಷ ಪಾಟೀಲ್ ಅವರು ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. ದೆಹಲಿಗೂ ಹೋಗಿ ಕೆಲ ಬಿಜೆಪಿ ನಾಯಕರಿಗೂ ಭೇಟಿಯಾಗಿ ಭ್ರಷ್ಟಾಚಾರದ ಕುರಿತು ಚರ್ಚೆ ಕೂಡ ನಡೆಸಿದ್ದರು. ಆದ್ರೆ ಯಾವುದೇ ಭರವಸೆ ಪಾಟೀಲ್ ಅವರಿಗೆ ಸಿಕ್ಕಿರಲಿಲ್ಲ ಎಂದವರು ವಿವರಿಸಿದ್ದಾರೆ.ಸಚಿವ ಈಶ್ವರಪ್ಪ ಸೇರಿದಂತೆ ಇಡೀ ಸರ್ಕಾರವೇ 40% ಕಮಿಷನ್ ಪಡೆಯುತ್ತಿದ್ದಾರೆ ಎಂದು ಗುತ್ತಿಗೆದಾರ ಸಂಘದ ಅಧ್ಯಕ್ಷರೇ ಗಂಭೀರವಾಗಿ ಆರೋಪ ಮಾಡಿದ್ದಾರೆ. ಪ್ರಧಾನಿಗೂ ಪತ್ರ ಬರೆದಿದ್ದಾರೆ. ಆದ್ರೆ ಇಲ್ಲಿವರೆಗೆ ಪ್ರಧಾನಿಯಾಗಲಿ, ಸಿಎಂ ಆಗಲಿ ಅದರ ಆರೋಪದ ಬಗ್ಗೆ ಚರ್ಚೆ ಮಾಡಲು ತಯಾರಿಲ್ಲ. ಸಂತೋಷ್ ಪಾಟೀಲ್ ಬರೆದ ಪತ್ರವನ್ನ ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಿದ್ದರೆ ಅಮಾಯಕ ಗುತ್ತಿಗೆದಾರನ ಪ್ರಾಣ ಉಳಿಯುತ್ತಿತ್ತು. ಸರ್ಕಾರ ಬೇಜವಾಬ್ದಾರಿತನದಿಂದ ಬಾಳಿ ಬದುಕ ಬೇಕಿದ್ದ ಪಾಟೀಲ್ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದು ಸರ್ಕಾರ ವೈಫಲ್ಯದಿಂದಾದ ಕೊಲೆಯಲ್ಲವೇ ಎಂದವರು ಪ್ರಶ್ನಿಸಿದ್ದಾರೆ.ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಗೃಹ ಸಚಿವ ಕೆಜೆ ಜಾರ್ಜ್ ಮೇಲೆ ಆರೋಪ ಕೇಳಿ ಬಂದಾಗ ರಾಜೀನಾಮೆ ನೀಡಿ ತನಿಖೆ ಎದುರಿಸಿದ್ದರು. ಕೂಡಲೇ ಸಚಿವ ಈಶ್ವರಪ್ಪ ರಾಜೀನಾಮೆ ನೀಡಬೇಕು, ಅಥವಾ ಮುಖ್ಯಮಂತ್ರಿಗಳು ವಜಾ ಮಾಡಬೇಕು. ಸಂತೋಷ್ ಪಾಟೀಲ್ ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ, ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸುತ್ತೇನೆ ಎಂದವರು ಹೇಳಿದ್ದಾರೆ. Show Full Article Advertisement Next Read: ಬಿಜೆಪಿ ಕಾರ್ಯಕರ್ತನಾಗಿದ್ದ ಗುತ್ತಿಗೆದಾರನ ಸ್ಥಿತಿಯೇ ಹೀಗಾದರೆ ಬೇರೆಯವರ ಗತಿ ಏನು? ಬಿಜೆಪಿ ಸರ್ಕಾರದ ಕರ್ಮಕಾಂಡಕ್ಕೆ ಇನ್ನೆಷ್ಟು ಜೀವ ಬಲಿಯಾಗಬೇಕು? : ಸಿದ್ದರಾಮಯ್ಯ ಕಿಡಿ » Advertisement Recent Posts "ಮೋದಿಜೀ, ಭಯ ಆಗ್ತಿದೆಯಾ?" ರಾಹುಲ್ ವಿಡಿಯೋ ನೋಡಿ ಮೋದಿಯ ಬಾಲಿಷ ಹೇಳಿಕೆಗಳ ಪಟ್ಟಿ ಮಾಡಿದ ಸಿದ್ದರಾಮಯ್ಯ ಜೆ.ಪಿ ಹೆಗ್ಡೆ ಸಂಸದರಾಗಲಿ. ಕೋಟ ಪರಿಷತ್ ವಿಪಕ್ಷ ನಾಯಕರಾಗಿ ಮುಂದುವರಿಯಲಿ! "ದೇಶದ ಸಂಪತ್ತು ಸಮಾನ ಹಂಚಿಕೆ"ಯ ರಾಹುಲ್ ಗಾಂಧಿ ಯೋಜನೆಗಳು ತಪ್ಪೇ? ಜಯಪ್ರಕಾಶ ಹೆಗ್ಡೆ ಮತಯಾಚನೆ: ಫೋಟೋ ಸುದ್ದಿ ಈ ಬಾರಿಯ ಜೋಡುಕರೆ ಕಂಬಳದಲ್ಲಿ ಐಎಂಎ (ರಿ) ಮಂಗಳೂರು ನೇತೃತ್ವದ ತಂಡ! ಡಾ. ಅಂಬೇಡ್ಕರ್ ಜಯಂತಿ ದಿನ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಚಾರ ಅಭಿಯಾನ! ಕುಚ್ಚಲಕ್ಕಿ ನೀಡುವ ಕುರಿತು ಸುಳ್ಳು ಹೇಳಿದ್ದ ಕೋಟ v/s ನುಡಿದಂತೆ ನಡೆವ ಜೆ.ಪಿ ಹೆಗ್ಡೆ ಜಯಪ್ರಕಾಶ ಹೆಗ್ಡೆಯವರೇ ಸಂಸದರಾಗಬೇಕು! ಏಕೆಂದರೆ... ಕಾಂಗ್ರೆಸ್ ನಾಯಕ ಹೇರಿಕುದ್ರು ಗಂಗಾಧರ ಶೆಟ್ಟಿ ಇನ್ನಿಲ್ಲ. ಮಾರ್ಚ್ 12: ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ! ಕಾಲಜ್ಞಾನ ಭವಿಷ್ಯದ ಪ್ರಕಾರ ಪ್ರಿಯಾಂಕಾ ಗಾಂಧಿ ಪ್ರಧಾನಿ: ನೊಣವಿನಕೆರೆ ಗುರೂಜಿ! ಚುನಾವಣಾ ಬಾಂಡ್ ನಿಷೇಧ- ಸುಪ್ರಿಂ ಕೋರ್ಟ್ ತೀರ್ಪು ಶ್ಲಾಘನೀಯ: ಸಿದ್ದರಾಮಯ್ಯ ಮಂಗಳೂರು: ಸೈಂಟ್ ಜೆರೋಜಾ ಶಾಲೆಯಲ್ಲಿ ನಿಜಕ್ಕೂ ನಡೆದದ್ದು ಏನು? ಕಾಂಗ್ರೆಸ್ ಪುನಶ್ಚೇತನ ಯಾವಾಗ?