Homepageರಾಜ್ಯಸಚಿವ ಅಶ್ವತ್ಥ್ ನಾರಾಯಣ್ ಅವರು ʼಹಗರಣದ ಪಿತಾಮಹʼ ಆಗಿದ್ದಾರೆ. ಅವರನ್ನು ಭ್ರಷ್ಟಾಚಾರದ ʼವಿಶ್ವಮಾನವʼ ಎಂದು ಕರೆಯುವುದು ಸೂಕ್ತ: ಡಿಕೆಶಿ ಸಚಿವ ಅಶ್ವತ್ಥ್ ನಾರಾಯಣ್ ಅವರು ʼಹಗರಣದ ಪಿತಾಮಹʼ ಆಗಿದ್ದಾರೆ. ಅವರನ್ನು ಭ್ರಷ್ಟಾಚಾರದ ʼವಿಶ್ವಮಾನವʼ ಎಂದು ಕರೆಯುವುದು ಸೂಕ್ತ: ಡಿಕೆಶಿ Advertisement ಪಿಎಸ್ಐ ಹಗರಣ, ಸಹಾಯಕ ಪ್ರಾಧ್ಯಾಪಕರು, ಎಫ್ಡಿಎ ಸೇರಿದಂತೆ ಎಲ್ಲ ನೇಮಕಾತಿಗಳಲ್ಲೂ ಭ್ರಷ್ಟಾಚಾರ ನಡೆದಿದೆ. ಪದೇ ಪದೆ ಆರೋಪ ನಿರಾಕರಿಸುತ್ತಿರುವ ಸಚಿವ ಅಶ್ವತ್ಥ್ ನಾರಾಯಣ್ ಅವರು ʼಹಗರಣದ ಪಿತಾಮಹʼ ಆಗಿದ್ದಾರೆ. ಅವರನ್ನು ಭ್ರಷ್ಟಾಚಾರದ ʼವಿಶ್ವಮಾನವʼ ಎಂದು ಕರೆಯುವುದು ಸೂಕ್ತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಪಿಎಸ್ಐ ಹಗರಣದಲ್ಲಿ ಎಷ್ಟು ಮಂದಿಗೆ ನೋಟಿಸ್ ನೀಡಲಾಗಿದೆ? ಅವರು ಏನೆಂದು ಉತ್ತರ ಕೊಟ್ಟಿದ್ದಾರೆ? ಯಾವೆಲ್ಲ ಪರೀಕ್ಷಾ ಕೇಂದ್ರಗಳ ಬಗ್ಗೆ ತನಿಖೆಯಾಗಿದೆ? ಬಂಧಿತರು ನೀಡಿರುವ ಹೇಳಿಕೆಗಳೇನು? ಎಷ್ಟು ಮಂದಿಯನ್ನು ಬಂಧಿಸದೆ ಬಿಟ್ಟು ಕಳುಹಿಸಲಾಗಿದೆ? ಎಂಬೆಲ್ಲಾ ಮಾಹಿತಿಯನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದವರು ಒತ್ತಾಯಿಸಿದ್ದಾರೆ.ಪಿಎಸ್ಐ ಹಗರಣದ ಕುರಿತು ಮಾತನಾಡಲು ಪ್ರಿಯಾಂಕ್ ಖರ್ಗೆ ಅವರಿಗೆ ಪಕ್ಷ ಜವಾಬ್ದಾರಿ ವಹಿಸಿದೆ. ಅವರು ಹೇಳುತ್ತಿರುವ ಎಲ್ಲ ವಿಷಯಗಳು ಸಾರ್ವಜನಿಕವಾಗಿ ಲಭ್ಯವಿದೆ. ಅದನ್ನು ತನಿಖೆ ಮಾಡುವ ಬದಲು ನಮಗೆ ನೋಟಿಸ್ ಕೊಟ್ಟು ದಾಖಲೆ ಕೇಳುತ್ತಿರುವುದು ಪೂಲೀಸರ ಅಸಮರ್ಥತೆಯನ್ನು ಸಾಬೀತುಪಡಿಸಿದೆ ಎಂದವರು ಹೇಳಿದರು.ಈ ಹಿಂದೆ ವಿಧಾನಸಭೆ ಮತ್ತು ಪರಿಷತ್ನಲ್ಲಿ ಪಿಎಸ್ಐ ಹಗರಣದ ಬಗ್ಗೆ ಪ್ರಶ್ನೆ ಕೇಳಿದಾಗ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಏನು ನಡೆದಿಲ್ಲ ಎಂದ ಮೇಲೆ ಎಫ್ಐಆರ್ ಹಾಕಿರುವುದು ಏಕೆ? 20ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿರುವುದು ಏಕೆ? ಬಿಜೆಪಿ ಸರ್ಕಾರವು ನೋಟಿಸ್ ಕೊಡುವ ಸಂಪ್ರದಾಯವನ್ನು ಶುರು ಮಾಡಿದೆ. ಆದರೆ,ಭ್ರಷ್ಟಾಚಾರದ ಬಗ್ಗೆ ಪದೇ ಪದೆ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್, ಎಚ್.ವಿಶ್ವನಾಥ್ ಅವರಿಗೆ ನೋಟಿಸ್ ನೀಡದೆ, ಪ್ರತಿಪಕ್ಷದ ಮುಖಂಡರಾದ ಪ್ರಿಯಾಂಕ್ ಖರ್ಗೆ ಅವರಿಗೆ ಮಾತ್ರ ನೋಟಿಸ್ ನೀಡಿರುವುದು ಏಕೆ ಎಂದವರು ಪ್ರಶ್ನಿಸಿದ್ದಾರೆ. Show Full Article Advertisement Next Read: ಮೇ 15: ಕನ್ನಡ ಮೀಡಿಯಾ ಡಾಟ್ ಕಾಮ್ ವರ್ಷಾಚರಣೆ: "ಬೇರೆಯೇ ಮಾತು" ಪುಸ್ತಕ ಬಿಡುಗಡೆ » Advertisement Recent Posts ಜೆ.ಪಿ ಹೆಗ್ಡೆ ಸಂಸದರಾಗಲಿ. ಕೋಟ ಪರಿಷತ್ ವಿಪಕ್ಷ ನಾಯಕರಾಗಿ ಮುಂದುವರಿಯಲಿ! "ದೇಶದ ಸಂಪತ್ತು ಸಮಾನ ಹಂಚಿಕೆ"ಯ ರಾಹುಲ್ ಗಾಂಧಿ ಯೋಜನೆಗಳು ತಪ್ಪೇ? ಜಯಪ್ರಕಾಶ ಹೆಗ್ಡೆ ಮತಯಾಚನೆ: ಫೋಟೋ ಸುದ್ದಿ ಈ ಬಾರಿಯ ಜೋಡುಕರೆ ಕಂಬಳದಲ್ಲಿ ಐಎಂಎ (ರಿ) ಮಂಗಳೂರು ನೇತೃತ್ವದ ತಂಡ! ಡಾ. ಅಂಬೇಡ್ಕರ್ ಜಯಂತಿ ದಿನ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಚಾರ ಅಭಿಯಾನ! ಕುಚ್ಚಲಕ್ಕಿ ನೀಡುವ ಕುರಿತು ಸುಳ್ಳು ಹೇಳಿದ್ದ ಕೋಟ v/s ನುಡಿದಂತೆ ನಡೆವ ಜೆ.ಪಿ ಹೆಗ್ಡೆ ಜಯಪ್ರಕಾಶ ಹೆಗ್ಡೆಯವರೇ ಸಂಸದರಾಗಬೇಕು! ಏಕೆಂದರೆ... ಕಾಂಗ್ರೆಸ್ ನಾಯಕ ಹೇರಿಕುದ್ರು ಗಂಗಾಧರ ಶೆಟ್ಟಿ ಇನ್ನಿಲ್ಲ. ಮಾರ್ಚ್ 12: ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ! ಕಾಲಜ್ಞಾನ ಭವಿಷ್ಯದ ಪ್ರಕಾರ ಪ್ರಿಯಾಂಕಾ ಗಾಂಧಿ ಪ್ರಧಾನಿ: ನೊಣವಿನಕೆರೆ ಗುರೂಜಿ! ಚುನಾವಣಾ ಬಾಂಡ್ ನಿಷೇಧ- ಸುಪ್ರಿಂ ಕೋರ್ಟ್ ತೀರ್ಪು ಶ್ಲಾಘನೀಯ: ಸಿದ್ದರಾಮಯ್ಯ ಮಂಗಳೂರು: ಸೈಂಟ್ ಜೆರೋಜಾ ಶಾಲೆಯಲ್ಲಿ ನಿಜಕ್ಕೂ ನಡೆದದ್ದು ಏನು? ಕಾಂಗ್ರೆಸ್ ಪುನಶ್ಚೇತನ ಯಾವಾಗ? ಉತ್ತರದ ವೈಫಲ್ಯಕ್ಕೆ ದಕ್ಷಿಣಕ್ಕೆ ಶಿಕ್ಷೆ? - ಮಟ್ಟು "ಇದು ವಿನಾಶಕಾರಿ ಬಜೆಟ್" ಸಿದ್ದರಾಮಯ್ಯ ವಿಶ್ಲೇಷಣೆ