Advertisement

ನಾಡಗೀತೆಯನ್ನು ಅವಮಾನಿಸಿದ್ದ ರೋಹಿತ್ ಚಕ್ರತೀರ್ಥನನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ವಜಾ ಮಾಡಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

Advertisement
"ನಾಡಗೀತೆಯನ್ನು ಅವಹೇಳನ‌ ಮಾಡಿದ್ದ ಹಾಗೂ ರಾಷ್ಟ್ರಕವಿಯನ್ನು ಗೇಲಿ ಮಾಡಿದ್ದ ರೋಹಿತ್ ಚಕ್ರತೀರ್ಥನಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಾನ- ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು" ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ರೋಹಿತ್ ಚಕ್ರತೀರ್ಥರದ್ದು ಎನ್ನಲಾದ ನಾಡಗೀತೆಯನ್ನು ತಿರುಚಿ ಅವಮಾನಿಸಿದ್ದ 2017ರ ಟ್ವೀಟ್‌ನ ಸ್ಕ್ರೀನ್ ಶಾಟ್ ಅನ್ನು ಪೋಸ್ಟ್ ಮಾಡಿದ್ದಾರೆ.

Advertisement
Advertisement
Recent Posts
Advertisement