Homepageರಾಜ್ಯಅಪರೇಷನ್ ಕಮಲ ಎಂಬ ಅಕ್ರಮದ ಹಾದಿಯಲ್ಲಿ ಅಧಿಕಾರ ಹಿಡಿದವರು ಜನಪರ ಆಡಳಿತ ನೀಡಲು ಸಾಧ್ಯವಿಲ್ಲ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಪರೇಷನ್ ಕಮಲ ಎಂಬ ಅಕ್ರಮದ ಹಾದಿಯಲ್ಲಿ ಅಧಿಕಾರ ಹಿಡಿದವರು ಜನಪರ ಆಡಳಿತ ನೀಡಲು ಸಾಧ್ಯವಿಲ್ಲ: ಉಡುಪಿ ಜಿಲ್ಲಾ ಕಾಂಗ್ರೆಸ್ Advertisement ಅಕ್ರಮದ ಹಾದಿಯಲ್ಲಿ ಅಧಿಕಾರ ಹಿಡಿದವರು ಸಕ್ರಮದ ಆಡಳಿತ ನೀಡಲು ಸಾಧ್ಯವಿಲ್ಲ. ಇದಕ್ಕೆ ಬಗೆದಷ್ಟು ಹೊರಬರುತ್ತಿರುವ ಭ್ರಷ್ಟಾಚಾರ ಪ್ರಕರಣಗಳನ್ನು ಹೊದ್ದು ಮಲಗಿರುವ ರಾಜ್ಯದ ಬಿಜೆಪಿ ಸರಕಾರ ಒಂದು ಉತ್ತಮ ಉದಾಹರಣೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.ಕಾಮಗಾರಿಗಳಲ್ಲಿ 40 ಪರ್ಸೆಂಟ್ ಕಮಿಷನ್, ಪಿಎಸ್ಐ ನೇಮಕಾತಿಯಲ್ಲಿ ಕೋಟ್ಯಾಂತರ ರೂ. ಲಂಚವೇ ಮೊದಲಾದ ಭ್ರಷ್ಟಾಚಾರ ಪ್ರಕರಣಗಳು ಬೆಳಕಿಗೆ ಬಂದು ಆಳುವ ಸರಕಾರ ಇಕ್ಕಟ್ಟಿಗೆ ಸಿಲುಕಿರುವ ಈ ಹೊತ್ತಲ್ಲಿ ಇದೀಗ ಮತ್ತೆ 1252 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯಲ್ಲಿಯೂ ಪ್ರಶ್ನಾಪತ್ರಿಕೆ ಸೋರಿಕೆ, ಉತ್ತರ ಪತ್ರಿಕೆ ತಿದ್ದುಪಡಿಯ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಕೋಟಿ ಕೋಟಿ ರೂ. ಭ್ರಷ್ಟಾಚಾರ ಪ್ರಕರಣದಡಿಯಲ್ಲಿ ಸಂಬಂದ ಪಟ್ಟ ಇಲಾಖೆಯ ರಿಜಿಸ್ಟ್ರಾರ್ ಹಾಗೂ ಅತಿಥಿ ಉಪಾನ್ಯಾಸಕಿ ಒಬ್ಬಳನ್ನು ಬಂಧಿಸುವ ನಾಟಕ ಮಾಡಿ ಕೈ ತೊಳೆದುಕೊಳ್ಳಲು ನೋಡುತ್ತಿದೆ. ರಾಜ್ಯದಲ್ಲಿ 430 ಕ್ಕೂ ಹೆಚ್ಚು ಪ್ರಾಂಶುಪಾಲ ಹುದ್ದೆಗಳು ಖಾಲಿ ಇದ್ದು 310 ಮಂದಿ ಪ್ರಾಂಶುಪಾಲರ ರೆಗ್ಯುಲರ್ ನೇಮಕಾತಿಯಲ್ಲಿಯೂ ಅಕ್ರಮ ನಡೆದಿದೆ ಎನ್ನಲಾಗಿದೆ. ಈ ಎಲ್ಲ ಹಗರಣಗಳು ಉನ್ನತ ಶಿಕ್ಷಣ ಇಲಾಖೆಯ ಮೂಗಿನ ನೇರಕ್ಕೆ ನಡೆಯುತ್ತಿವೆ. ಈ ಬಗ್ಗೆ ಕಾಲೇಜು ಶಿಕ್ಷಣ ಆಯುಕ್ತರೂ ಸೇರಿ ಉನ್ನತ ಶಿಕ್ಷಣ, ತಾಂತ್ರಿಕ ಶಿಕ್ಷಣ ಇಲಾಖೆಯ ವಿರುದ್ದ ಉನ್ನತ ಮಟ್ಟದ ತನಿಕೆ ನಡೆಯ ಬೇಕು. ಆದರೆ ಸರಕಾರ ಈ ಬಗ್ಗೆ ಹಿಂದೇಟು ಹಾಕುತ್ತಿರುವುದರ ಔಚಿತ್ಯವೇನು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.ಮುಖ್ಯಮಂತ್ರಿ ಗಾಧಿಯ ಬೆಲೆಯನ್ನು 2500 ಕೋಟಿ ರೂ. ಗೆ ನಿಗದಿ ಪಡಿಸಿ ಲೇವಡಿ ಮಾಡುವ ನಾಯಕರನ್ನು ಹೊಂದಿರುವ ಈ ಪಕ್ಷ ರಾಜಕೀಯದ ಋಜುಮಾರ್ಗವನ್ನು ಮರೆತಿದೆ. ಆ ನೆಲೆಯಲ್ಲಿ ಈ ಪಕ್ಷ ಆಡಳಿತ ಯೋಗ್ಯವಲ್ಲ. ದೇಶದ ಸಾಂವಿಧಾನಿಕ ಮೌಲ್ಯ ಮತ್ತು ಪರಂಪರೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಸರಕಾರ ರಾಜಿನಾಮೆ ಕೊಟ್ಟು ಹೊಸ ಸರಕಾರ ರಚನೆಗೆ ಅವಕಾಶ ಮಾಡಿ ಕೊಡಬೇಕು ಎಂದು ಜಿಲ್ಲಾ ವಕ್ತಾರ ಬಿಪಿನಚಂದ್ರಪಾಲ್ ನಕ್ರೆ ಹೇಳಿದ್ದಾರೆ. Show Full Article Advertisement Next Read: ಕನ್ನಡ ಮೀಡಿಯಾ ಡಾಟ್ ಕಾಂ ವರ್ಷಾಚರಣೆ: "ಬೇರೆಯೇ ಮಾತು" ಪುಸ್ತಕ ಬಿಡುಗಡೆ » Advertisement Recent Posts ಜೆ.ಪಿ ಹೆಗ್ಡೆ ಸಂಸದರಾಗಲಿ. ಕೋಟ ಪರಿಷತ್ ವಿಪಕ್ಷ ನಾಯಕರಾಗಿ ಮುಂದುವರಿಯಲಿ! "ದೇಶದ ಸಂಪತ್ತು ಸಮಾನ ಹಂಚಿಕೆ"ಯ ರಾಹುಲ್ ಗಾಂಧಿ ಯೋಜನೆಗಳು ತಪ್ಪೇ? ಜಯಪ್ರಕಾಶ ಹೆಗ್ಡೆ ಮತಯಾಚನೆ: ಫೋಟೋ ಸುದ್ದಿ ಈ ಬಾರಿಯ ಜೋಡುಕರೆ ಕಂಬಳದಲ್ಲಿ ಐಎಂಎ (ರಿ) ಮಂಗಳೂರು ನೇತೃತ್ವದ ತಂಡ! ಡಾ. ಅಂಬೇಡ್ಕರ್ ಜಯಂತಿ ದಿನ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಚಾರ ಅಭಿಯಾನ! ಕುಚ್ಚಲಕ್ಕಿ ನೀಡುವ ಕುರಿತು ಸುಳ್ಳು ಹೇಳಿದ್ದ ಕೋಟ v/s ನುಡಿದಂತೆ ನಡೆವ ಜೆ.ಪಿ ಹೆಗ್ಡೆ ಜಯಪ್ರಕಾಶ ಹೆಗ್ಡೆಯವರೇ ಸಂಸದರಾಗಬೇಕು! ಏಕೆಂದರೆ... ಕಾಂಗ್ರೆಸ್ ನಾಯಕ ಹೇರಿಕುದ್ರು ಗಂಗಾಧರ ಶೆಟ್ಟಿ ಇನ್ನಿಲ್ಲ. ಮಾರ್ಚ್ 12: ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ! ಕಾಲಜ್ಞಾನ ಭವಿಷ್ಯದ ಪ್ರಕಾರ ಪ್ರಿಯಾಂಕಾ ಗಾಂಧಿ ಪ್ರಧಾನಿ: ನೊಣವಿನಕೆರೆ ಗುರೂಜಿ! ಚುನಾವಣಾ ಬಾಂಡ್ ನಿಷೇಧ- ಸುಪ್ರಿಂ ಕೋರ್ಟ್ ತೀರ್ಪು ಶ್ಲಾಘನೀಯ: ಸಿದ್ದರಾಮಯ್ಯ ಮಂಗಳೂರು: ಸೈಂಟ್ ಜೆರೋಜಾ ಶಾಲೆಯಲ್ಲಿ ನಿಜಕ್ಕೂ ನಡೆದದ್ದು ಏನು? ಕಾಂಗ್ರೆಸ್ ಪುನಶ್ಚೇತನ ಯಾವಾಗ? ಉತ್ತರದ ವೈಫಲ್ಯಕ್ಕೆ ದಕ್ಷಿಣಕ್ಕೆ ಶಿಕ್ಷೆ? - ಮಟ್ಟು "ಇದು ವಿನಾಶಕಾರಿ ಬಜೆಟ್" ಸಿದ್ದರಾಮಯ್ಯ ವಿಶ್ಲೇಷಣೆ