Homepageರಾಜ್ಯಎಸ್ಸೆಸ್ಸೆಲ್ಸಿ ಪಠ್ಯದಿಂದ ಪೆರಿಯಾರ್ ಮತ್ತು ನಾರಾಯಣ ಗುರುಗಳ ಪಾಠ ಕೈಬಿಟ್ಟು, ಆರೆಸ್ಸೆಸ್ ಸಂಸ್ಥಾಪಕರ ಪಠ್ಯ ಸೇರಿಸಿರುವುದು ಅಕ್ಷಮ್ಯ: ಉಡುಪಿ ಜಿಲ್ಲಾ ಕಾಂಗ್ರೆಸ್ ಎಸ್ಸೆಸ್ಸೆಲ್ಸಿ ಪಠ್ಯದಿಂದ ಪೆರಿಯಾರ್ ಮತ್ತು ನಾರಾಯಣ ಗುರುಗಳ ಪಾಠ ಕೈಬಿಟ್ಟು, ಆರೆಸ್ಸೆಸ್ ಸಂಸ್ಥಾಪಕರ ಪಠ್ಯ ಸೇರಿಸಿರುವುದು ಅಕ್ಷಮ್ಯ: ಉಡುಪಿ ಜಿಲ್ಲಾ ಕಾಂಗ್ರೆಸ್ Advertisement 2022ರ ಸಾಲಿನಿಂದ ಫ್ರೌಢ ಶಾಲಾ ಶಿಕ್ಷಣ ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಈ ಹಿಂದೆಯಿದ್ದ ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳವಳಿಗಳು ಎಂಬ ಅಧ್ಯಾಯವನ್ನು ಕೈ ಬಿಟ್ಟು ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ ಮತ್ತು ಪೆರಿಯಾರ್ ಎಂಬ ಪಾಠಕ್ಕೆ ಕತ್ತರಿ ಹಾಕುವ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕ್ರಮ ಶಿಕ್ಷಣ ಕ್ಷೇತ್ರಕ್ಕೆ ಮಾಡಿದ ಮಹಾಪಮಾನ. ಸರಕಾರ ಈ ಬಗ್ಗೆ ಪುನರ್ವಿಮರ್ಶೆ ಮಾಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪತ್ರಿಕಾ ಹೇಳಿಕೆಯಲ್ಲಿ ಸರಕಾರವನ್ನು ಒತ್ತಾಯಿಸಿದೆ.ಒಂದೇ ಜಾತಿ ಮತ ದೇವರು ಎಂಬ ಸಿದ್ಧಾಂತದೊಂದಿಗೆ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ದಾರ್ಶನಿಕ ಪುರುಷ ಶ್ರೀ ನಾರಾಯಣ ಗುರು ಮತ್ತು ಜನಾಂಗೀಯ ಅಸಮಾನತೆಯ ವಿರುದ್ಧ ಧ್ವನಿಯೆತ್ತಿ ಸಮಾನತೆಯ ಸಿದ್ಧಾಂತ ಸಾರಿದ ಪೆರಿಯಾರ್ ಪಾಠವನ್ನು ಬದಿಗಿಟ್ಟು ಆರ್ ಎಸ್ ಎಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣದ ವಿಷಯವನ್ನು ಪಾಠವನ್ನಾಗಿ ಸೇರಿಸುವ ಔಚಿತ್ಯವಾದರೂ ಏನು ಎಂದು ಪ್ರಶ್ನಿಸಿರುವ ಕಾಂಗ್ರೆಸ್, ರಾಜ್ಯದ ಬಿಜೆಪಿ ಸರಕಾರದ ಈ ನಡೆಯ ಹಿಂದೆ ಸಾಮಾಜಿಕ ನ್ಯಾಯಕ್ಕೆ ಧ್ವನಿಯಾದವರ ಧ್ವನಿಯಡಗಿಸುವ ಮೂಲಭೂತವಾದಿ ಚಿಂತನೆಯ ಪಿತೂರಿಯಡಗಿದೆ ಎಂದು ಆರೋಪಿಸಿದೆ. ದೇಶದ ಸರ್ವಾಂಗೀಣ ಅಭಿವೃದ್ದಿಗೆ ಪೂರಕವಾದ ಶಿಕ್ಷಣ ತಾರತಮ್ಯ ರಹಿತವಾಗಿರ ಬೇಕೇ ಹೊರತು ಯಾವುದೇ ಒಂದು ಪಕ್ಷ ಅಥವಾ ವ್ಯಕ್ತಿಯ ಸೈದ್ದಾಂತೀಕತೆಯ ಹಿತಾಸಕ್ತಿಯನ್ನು ಅವಲಂಬಿತವಾಗ ಬಾರದು. ಆ ನೆಲೆಯಲ್ಲಿ ಸರಕಾರ ಕೂಡಲೇ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿಯನ್ನು ವಜಾ ಗೊಳಿಸಬೇಕು. ಶ್ರೀ ನಾರಾಯಣಗುರು ಹಾಗೂ ಪೆರಿಯಾರ್ ವಿಚಾರಧಾರೆಗಳ ಪಾಠವನ್ನು ಪಠ್ಯ ಪುಸ್ತಕದಲ್ಲಿ ಮರುಸೇರಿಸಿ ಸರಕಾರ ತನ್ನ ಸಾಮಾಜಿಕ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಬೇಕು ಎಂದು ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಕರ್ನಾಟಕ ರಾಜ್ಯ ಸರಕಾರದ ನೇತೃತ್ವದಲ್ಲಿ ಶಿಕ್ಷಣ ಇಲಾಖೆ ಮುದ್ರಿಸುವ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ ಶಿರೋನಾಮೆಯೊಂದಿಗೆ ನಾರಾಯಣ ಗುರುಗಳ ಜೀವನ ಚರಿತ್ರೆಯ ಪಠ್ಯವನ್ನು ವಿದ್ಯಾರ್ಥಿಗಳಿಗೆ ಈ ತನಕ ಬೋಧಿಸಲಾಗುತ್ತಿತ್ತು. ಈ ಪಠ್ಯದ ಮೂಲಕ ನಾರಾಯಣ ಗುರುಗಳ "ಒಂದೇ ಜಾತಿ, ಒಂದೇ ಧರ್ಮ ಮತ್ತು ಒಬ್ಬನೇ ದೇವರು" ತತ್ವಗಳ ಬಗ್ಗೆ ಕೂಡ ಬೋಧಿಸಲಾಗುತ್ತಿತ್ತು. ಇದು ಎಳೆಯ ವಿಧ್ಯಾರ್ಥಿಗಳಲ್ಲಿ ಸಾಮಾಜಿಕ ಪ್ರಜ್ಞೆಯನ್ನು ಹೊಮ್ಮಿಸುತ್ತಿತ್ತು. ಹಾಗೆಯೇ, ಇಪ್ಪತ್ತನೇ ಶತಮಾನದ ಆರಂಭದಲ್ಲಿ ಈ ದೇಶದ ಮೇಲ್ಜಾತಿ ಜನರಿಂದ ನಡೆವ ಬಿಟ್ಟಿಚಾಕರಿ, ಶೋಷಣೆ, ದಬ್ಬಾಳಿಕೆ, ದೌರ್ಜನ್ಯಗಳ ವಿರುದ್ಧ ಸಾಮಾಜಿಕ ಚಳುವಳಿಯನ್ನೇ ಹುಟ್ಟುಹಾಕಿದ ಪೆರಿಯಾರ್ ರವರ ಕುರಿತು ಮತ್ತೊಂದು ಪಠ್ಯವನ್ನು ಬೋಧಿಸಲಾಗುತ್ತಿತ್ತು. ಆದರೆ ಮನುವಾದಿ ನೇತೃತ್ವದ ರಾಜ್ಯ ಸರ್ಕಾರ, ಶೋಷಿತರ ಪರ ಧ್ವನಿಯಾಗಿದ್ದ ಈ ಎರಡು ಮಹಾನ್ ದಾರ್ಶನಿಕರ ಜೀವನ ಚರಿತ್ರೆಯನ್ನು ಎಸ್ಸೆಸ್ಸೆಲ್ಸಿ ಪಠ್ಯದಿಂದ ತೆಗೆದು ಹಾಕಿದೆ ಎಂಬ ಆರೋಪಗಳು ಕೇಳಿ ಬಂದಿದೆ. ರಾಜ್ಯದಾದ್ಯಂತ ನಾರಾಯಣ ಗುರುಗಳ ಅನುಯಾಯಿಗಳಿಂದ ಈ ಕುರಿತು ಆಕ್ರೋಶ ವ್ಯಕ್ತವಾಗಿದೆ. Show Full Article Advertisement Next Read: ಹೆಡ್ಗೆವಾರ್ ಪಠ್ಯದಲ್ಲಿ ಸೇರಿಸಲು ಲಾಯಕ್ಕಿಲ್ಲದ ವ್ಯಕ್ತಿ ಎಂದು ಕರ್ನಾಟಕ ಸರ್ಕಾರವೇ ಒಪ್ಪಿಕೊಂಡಿದೆ: ಡಾ. ಎಚ್.ಸಿ ಮಹಾದೇವಪ್ಪ » Advertisement Recent Posts ಜಯಪ್ರಕಾಶ ಹೆಗ್ಡೆ ಮತಯಾಚನೆ: ಫೋಟೋ ಸುದ್ದಿ ಈ ಬಾರಿಯ ಜೋಡುಕರೆ ಕಂಬಳದಲ್ಲಿ ಐಎಂಎ (ರಿ) ಮಂಗಳೂರು ನೇತೃತ್ವದ ತಂಡ! ಡಾ. ಅಂಬೇಡ್ಕರ್ ಜಯಂತಿ ದಿನ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಚಾರ ಅಭಿಯಾನ! ಕುಚ್ಚಲಕ್ಕಿ ನೀಡುವ ಕುರಿತು ಸುಳ್ಳು ಹೇಳಿದ್ದ ಕೋಟ v/s ನುಡಿದಂತೆ ನಡೆವ ಜೆ.ಪಿ ಹೆಗ್ಡೆ ಜಯಪ್ರಕಾಶ ಹೆಗ್ಡೆಯವರೇ ಸಂಸದರಾಗಬೇಕು! ಏಕೆಂದರೆ... ಕಾಂಗ್ರೆಸ್ ನಾಯಕ ಹೇರಿಕುದ್ರು ಗಂಗಾಧರ ಶೆಟ್ಟಿ ಇನ್ನಿಲ್ಲ. ಮಾರ್ಚ್ 12: ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ! ಕಾಲಜ್ಞಾನ ಭವಿಷ್ಯದ ಪ್ರಕಾರ ಪ್ರಿಯಾಂಕಾ ಗಾಂಧಿ ಪ್ರಧಾನಿ: ನೊಣವಿನಕೆರೆ ಗುರೂಜಿ! ಚುನಾವಣಾ ಬಾಂಡ್ ನಿಷೇಧ- ಸುಪ್ರಿಂ ಕೋರ್ಟ್ ತೀರ್ಪು ಶ್ಲಾಘನೀಯ: ಸಿದ್ದರಾಮಯ್ಯ ಮಂಗಳೂರು: ಸೈಂಟ್ ಜೆರೋಜಾ ಶಾಲೆಯಲ್ಲಿ ನಿಜಕ್ಕೂ ನಡೆದದ್ದು ಏನು? ಕಾಂಗ್ರೆಸ್ ಪುನಶ್ಚೇತನ ಯಾವಾಗ? ಉತ್ತರದ ವೈಫಲ್ಯಕ್ಕೆ ದಕ್ಷಿಣಕ್ಕೆ ಶಿಕ್ಷೆ? - ಮಟ್ಟು "ಇದು ವಿನಾಶಕಾರಿ ಬಜೆಟ್" ಸಿದ್ದರಾಮಯ್ಯ ವಿಶ್ಲೇಷಣೆ ಭಾರತ ಮತ್ತೊಮ್ಮೆ 'ಬ್ರಾಹ್ಮಣೀಯ ಗುಲಾಮಗಿರಿ'ಯತ್ತ ಚಲಿಸುತ್ತಿದೆಯೇ? ಕುಮಾರಸ್ವಾಮಿಯವರದ್ದು ಏನೂ ತಪ್ಪಿಲ್ಲ- ತಪ್ಪೆಲ್ಲಾ ಅವರನ್ನು ನಂಬಿದವರದ್ದು: ಮಟ್ಟು