Advertisement

ಬ್ಯಾರೀಸ್ ವಿದ್ಯಾ ಸಂಸ್ಥೆಗಳ ವತಿಯಿಂದ "ಸ್ವಚ್ಛ ಕಡಲತೀರ - ಹಸಿರು ಕೋಡಿ" ಅಭಿಯಾನ

Advertisement

"ಶ್ರದ್ದಾ ಭಕ್ತಿಯಿಂದ ಮಾಡುವ ಕಾಯಕಕ್ಕೆ ಭಗವಂತನ ಆಶೀರ್ವಾದ ಸದಾ ಇರುತ್ತದೆ" ಎಂಬ ನಂಬಿಕೆಗೆ ಸಾಕ್ಷಿಯಾಗಿ ಬ್ಯಾರೀಸ್ ವಿದ್ಯಾ ಸಂಸ್ಥೆಗಳು ನಡೆಸುತ್ತಿರುವ "ಸ್ವಚ್ಛ ಕಡಲತೀರ - ಹಸಿರು ಕೋಡಿ" ಅಭಿಯಾನದ 11 ನೇ ಹಂತ 31-07-2022 ರಂದು ಯಶಸ್ವಿಯಾಗಿ ನೆರವೇರಿತು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು , ಬೋಧಕ , ಬೋಧಕೇತರ ವರ್ಗದವರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ವಿದ್ಯಾರ್ಥಿ ಪೋಷಕರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಮತ್ತು ಪರಿಸರ ಪ್ರಿಯರು  ಈ ಕಾಯಕದಲ್ಲಿ  ತಮ್ಮನ್ನು ತೊಡಗಿಸಿಕೊಂಡು ಕೋಡಿಯ ಡೆಲ್ಟಾ ಪಾಯಿಂಟ್ ನಿಂದ ಹಳೆ ಅಳಿವೆ  ಕಿನಾರ ತುದಿಯ ವರೆಗಿನ ಸಮುದ್ರ ಕಿನಾರೆಯನ್ನು ಸ್ವಚ್ಛಗೊಳಿಸಿದರು.

"ಪರಿಸರ ಸಂರಕ್ಷಣೆ" ಎಂಬ ದೇವತಾ ಕಾಯಕದಲ್ಲಿ ಸಹಕರಿಸುತ್ತಿರುವ ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿಗಳು ಮತ್ತು ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಮತ್ತು ಎಲ್ಲಾ ಸಿಬ್ಬಂದಿ ವರ್ಗದವರಿಗೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ ಎಂ ಅಬ್ದುಲ್ ರೆಹಮಾನ್ ರವರು ಹೃತ್ಪೂರ್ವಕ ಕೃತಜ್ಞತೆಗಳನ್ನು ತಿಳಿಸಿರುತ್ತಾರೆ.

Advertisement
Advertisement
Recent Posts
Advertisement