Advertisement

ಬೈಂದೂರು: 50ಕ್ಕೂ ಹೆಚ್ಚು ಯುವ ಮುಖಂಡರು ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆ

Advertisement

ಕಾಂಗ್ರೆಸ್‌ ಯುವ ಮುಖಂಡ ಕೋಡಿ ಸುನಿಲ್ ಪೂಜಾರಿಯವರ ನೇತ್ರತ್ವದಲ್ಲಿ, ಬ್ರಹ್ಮ ಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘ (BSNDP) ಇದರ ಮಾಜಿ ಜಿಲ್ಲಾಧ್ಯಕ್ಷರಾದ ಮಹೇಶ್ ಪೂಜಾರಿ ಬಡಾಕೆರೆ ಮತ್ತು ಅರುಣ್ ಅಗಸ್ಟಿನ್ ಪಡುಕೋಣೆ ಇವರುಗಳು ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಯುವಕರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಅನ್ನು ಸೇರ್ಪಡೆಗೊಂಡಿದ್ದಾರೆ.

ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿಯವರ ಮನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಬೈಂದೂರು ನಗರ ಅಧ್ಯಕ್ಷರಾದ ನಾಗರಾಜ್ ಗಾಣಿಗ ಹಾಗೂ ಪಕ್ಷದ ಮುಖಂಡರಾದ ಮಂಜುನಾಥ ಪೂಜಾರಿ ತಗ್ಗರ್ಸೆ, ಅಸಂಘಟಿತ ಘಟಕದ ಅಧ್ಯಕ್ಷರಾದ ಮಾಣಿಕ್ಯ ಹೋಬಳಿದಾರ್, ಗುಲ್ವಾಡಿ ಗ್ರಾ. ಪಂ. ಅಧ್ಯಕ್ಷ ಸುದೇಶ್ ಶೆಟ್ಟಿ ಗುಲ್ವಾಡಿ, ಪ್ರಶಾಂತ್ ಪೂಜಾರಿ ಕರ್ಕಿ ಮುಂತಾದವರು ಉಪಸ್ಥಿತರಿದ್ದರು.

Advertisement
Advertisement
Recent Posts
Advertisement