Advertisement

ಜನರನ್ನು ಪ್ರಚೋದಿಸದಿರಿ, ನೀವೇ ಕೋವಿ ಹಿಡಿದು ಬನ್ನಿ: ಅಶ್ವಥ್ ನಾರಾಯಣ್ ಗೆ ಕರೆಕೊಟ್ಟ ಸಿದ್ದರಾಮಯ್ಯ

Advertisement

"ಟಿಪ್ಪುವನ್ನು ಹೊಡೆದುಹಾಕಿದಂತೆ ಸಿದ್ದರಾಮಯ್ಯನವರನ್ನು ಹೊಡೆದುಹಾಕಬೇಕು ಎಂದು ಸಚಿವ ಡಾ.ಅಶ್ವಥ್ ನಾರಾಯಣ್ ಜನರಿಗೆ ಕರೆನೀಡಿದ್ದಾರೆ. ಜನರನ್ನು ಯಾಕೆ ಹಿಂಸೆಗೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ" ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸರಣಿ ಟ್ವೀಟ್ ಮೂಲಕ ಅಶ್ವಥ್ ನಾರಾಯಣ್ ಗೆ ಕರೆ ನೀಡಿದ್ದಾರೆ.

"ನನ್ನ ಹತ್ಯೆಗೆ ಡಾ.ಅಶ್ವಥ್ ನಾರಾಯಣ್ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ?" ಎಂದವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

"ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ" ಎಂದು ಸಿದ್ದರಾಮಯ್ಯನವರು ಖೇದ ವ್ಯಕ್ತಪಡಿಸಿದ್ದಾರೆ.

"ಸಚಿವ ಡಾ.ಅಶ್ವಥ್ ನಾರಾಯಣ್ ಅವರು ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ.
ಮೌನ ಸಮ್ಮತಿಯ ಲಕ್ಷಣವೇ?" ಎಂದು ಅವರು ಪ್ರಧಾನಿ ಮತ್ತು ಮುಖ್ಯಮಂತ್ರಿಗಳ‌ ಟ್ವಿಟರ್ ಖಾತೆಯನ್ನು ಮೆನ್ಶನ್ ಮಾಡಿ‌ ಪ್ರಶ್ನಿಸಿದ್ದಾರೆ.

ಈಕುರಿತು ಹಲವು ಓದುಗರು ಪ್ರತಿಕ್ರಿಯಿಸಿದ್ದು ಚಂದ್ರು ಅರಕರೆ ಎಂಬುವರು "ಟಿಪ್ಪುಸುಲ್ತಾನ್ ರನ್ನು ಕೊಂದಿದ್ದು ಬ್ರಿಟಿಷರು. ಹಾಗಾದರೆ ನೀವು ಬ್ರಿಟೀಷರಾ? ಬಿಜೆಪಿ ಅಂದರೆ ಬ್ರಿಟಿಷ್ ಜನತಾ ಪಾರ್ಟಿನ?‌ಎಂದು ಪ್ರಶ್ನಿಸಿದ್ದಾರೆ.

Advertisement
Advertisement
Recent Posts
Advertisement