Advertisement

ಮೂಲ್ಕಿ ಮಹಿಳೆ ಹಾಗೂ ವಿಟ್ಲ ದಲಿತ ಬಾಲಕಿ ಪರ ಬಿಜೆಪಿಗರ ಪ್ರತಿಭಟನೆ ಯಾವಾಗ?: ವರೋನಿಕಾ

Advertisement

ಉಡುಪಿಯಲ್ಲಿನ ಕಾಲೇಜಿನ ಮಟ್ಟದಲ್ಲಿ ಅವರವರೊಳಗೇ ಇತ್ಯರ್ಥಗೊಂಡ "ವಿಧ್ಯಾರ್ಥಿಗಳ ವಿಡಿಯೋ ರೆಕಾರ್ಡಿಂಗ್ ಪ್ರಕರಣ"ವನ್ನು ರಾಷ್ಟ್ರವ್ಯಾಪಿ ಸುದ್ದಿಯಾಗುವಂತೆ ಪ್ರತಿಭಟಿಸಿದ ಬಿಜೆಪಿ ಹಾಗೂ ಸಂಘಪರಿವಾರದ ಮುಖಂಡರು ಮುಲ್ಕಿಯ ಪಕ್ಷಿಕೆರೆ ಎಂಬಲ್ಲಿ ಹಿಂದೂ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ ಪ್ರಕರಣದ ವಿಚಾರದಲ್ಲಿ ಯಾಕೆ ಮೌನ ವಹಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರರಾದ ವೇರೊನಿಕಾ ಕರ್ನೆಲಿಯೋ ಪ್ರಶ್ನಿಸಿದ್ದಾರೆ.

ಮಹಿಳೆಯನ್ನು ದ್ವಿತೀಯ ದರ್ಜೆಯ ಪ್ರಜೆಯಾಗಿ ನೋಡುವ ಮನುವಾದಿಗಳ ನೇತೃತ್ವದ ಬಿಜೆಪಿಗರಿಗೆ ಆಕೆಗೆ ಅವಮಾನ ಆದಾಗ ಆರೋಪಿಯ ಜಾತಿ ಧರ್ಮ ಮೊದಲು ನೋಡಿ ಮತ್ತೆ ಪ್ರತಿಭಟನೆ ಮಾಡುವುದು ಎನ್ನುವುದು ಈ ಪ್ರಕರಣದಲ್ಲಿ ಎದ್ದು ಕಾಣುತ್ತದೆ. ಮುಲ್ಕಿಯಲ್ಲಿ ಅವಮಾನಕ್ಕೆ ಒಳಗಾದ ಮಹಿಳೆ ಕೂಡ ಒಂದು ಹೆಣ್ಣು ಎನ್ನುವುದು ಇವರಿಗೆ ತಿಳಿದಿಲ್ಲವೆ? ವಿಟ್ಲದಲ್ಲಿ ಅಮಾಯಕ ಅಪ್ರಾಪ್ತ ದಲಿತ ಬಾಲಕಿ ಮೇಲೆ ಬಲಪಂಥೀಯ ಸಂಘಟನೆಗೆ ಸೇರಿದ್ದಾರೆ ಎನ್ನಲಾದ ಯುವಕರು ಅಮಾನುಷವಾಗಿ ಅತ್ಯಾಚಾರವೆಸಗಿದಾಗ ಕೂಡ ಬಿಜೆಪಿ ಹಾಗೂ ಸಂಘಪರಿವಾರದವರ ಬಾಯಿಗೆ ಬೀಗ ಬಿದ್ದಿರುವುದು ಇವರ ದ್ವಂದ್ವ ನೀತಿಯನ್ನು ಎತ್ತಿ ತೋರಿಸುತ್ತದೆ.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಸಂಪೂರ್ಣವಾಗಿ ನಿರುದ್ಯೋಗಿಗಳಾಗಿರುವ ಬಿಜೆಪಿಗರು ಸುಳ್ಳು ವಿಚಾರಗಳನ್ನು ಕೈಗೆತ್ತಿಕೊಂಡು ಗಲಭೆ ಎಬ್ಬಿಸುವುದೇ ಮುಖ್ಯ ಉದ್ದೇಶ ಎಂಬ ರೀತಿಯಲ್ಲಿ ವರ್ತಿಸುತ್ತಿರುವುದು ಖಂಡನೀಯ. ಉಡುಪಿ ಘಟನೆಯಾದಾಗ ಕೇವಲ ಸುದ್ದಿಗೋಷ್ಠಿ ನಡೆಸುವ ಸಲುವಾಗಿ ದೆಹಲಿಯಿಂದ ಉಡುಪಿಗೆ ಓಡೋಡಿ ಬಂದ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ವಿಟ್ಲ ಅಥವಾ ಮುಲ್ಕಿ ಘಟನೆ ಬಗ್ಗೆ ಮಾಹಿತಿಯೇ ಇಲ್ಲವೆಂಬಂತೆ ಮೌನವಾಗಿದ್ದಾರೆ. ಬಿಜೆಪಿಯ ಸಂಸದ ನಳಿನ್ ಕುಮಾರ್ ಕಟೀಲ್, ಇತರ ಎಲ್ಲಾ ಉಡುಪಿ ಮತ್ತು ಮಂಗಳೂರಿನ ಶಾಸಕರು ಘಟನೆಯ ಬಗ್ಗೆ ತುಟಿ ಬಿಚ್ಚದಿರುವುದು ಇವರಿಗೆ ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುವ ಹುನ್ನಾರವಾಗಿದೆ. ಘಟನೆಯಲ್ಲಿ ಬಂಧಿತರಾದ ಆರೋಪಿಗಳಿಗೆ ಸೂಕ್ತ ಶಿಕ್ಷೆ ನೀಡುವಲ್ಲಿ ರಾಜ್ಯ ಸರಕಾರ ಬದ್ಧವಾಗಿದ್ದು ಕನಿಷ್ಠ ಬಿಜೆಪಿ ಶಾಸಕರು ಈ ಘಟನೆಯ ವಿರುದ್ದ ದನಿ ಎತ್ತುವ ಸೌಜನ್ಯ ತೋರಿಸಲಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Recent Posts
Advertisement