Advertisement

ಕಲ್ಲಡ್ಕ ಭಟ್ ಮೇಲೆ ಕ್ರಮಕ್ಕೆ 'ಸಹಬಾಳ್ವೆ ಕುಂದಾಪುರ' ಆಗ್ರಹ!

Advertisement

ದಿನಾಂಕ 24.12.2023, ರವಿವಾರದಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದು ಜಾಗರಣ ವೇದಿಕೆ ಆಯೋಜಿಸಿದ್ದ ಹನುಮ ಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ , ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಎನ್ನುವವರು ಭಾರತದ ಸಂವಿಧಾನಿಕ ಕಾನೂನುಗಳನ್ನು ಉಲ್ಲಂಘಿಸುವ ಕೃತ್ಯಗಳನ್ನು ಎಸಗಿದ್ದಾರೆ ಎಂದು 'ಸಹಬಾಳ್ವೆ ಕುಂದಾಪುರ ಸಮಿತಿ' ಆಕ್ರೋಶ ವ್ಯಕ್ತಪಡಿಸಿದೆ.

ಭಟ್ ಅವರು ತಮ್ಮ ಭಾಷಣದಲ್ಲಿ ಮೊದಲನೆಯದಾಗಿ ಮುಸ್ಲಿಮ್ ಮಹಿಳೆಯರೂ ಸೇರಿದಂತೆ, ಭಾರತದ ಮಹಿಳೆಯರನ್ನು ಹೀನಾಯವಾಗಿ ಅವಮಾನಿಸುವಂತಹ ಮಾತುಗಳನ್ನು ಆಡಿದ್ದಾರೆ. ಎರಡನೆಯದಾಗಿ ಅಲ್ಪ ಸಂಖ್ಯಾತ ಸಮುದಾಯದ ವಿರುದ್ಧ ದ್ವೇಷವನ್ನು ಪ್ರಚೋಧಿಸುವ ಸಲುವಾಗಿ ವಾಸ್ತವಕ್ಕೆ ದೂರವಾದ ಕಲ್ಪಿತ ವಿಚಾರಗಳನ್ನು ಉದ್ರೇಕಕಾರಕವಾಗಿ ಹರಿ ಬಿಟ್ಟಿದ್ದಾರೆ. ಮೂರನೆಯದಾಗಿ ಸಂವಿಧಾನಿಕ ಅಧಿಕಾರ ವಹಿಸಿಕೊಂಡಿರುವ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳ ಮೇಲೆ ಸುಳ್ಳು ಆರೋಪಗಳ ಮೂಲಕ ದೂಷಣೆ ಮಾಡಿದ್ದಾರೆ. ಹಾಗೂ ನಾಲ್ಕನೆಯದಾಗಿ ದೇಶದ ಸರ್ವೋಚ್ಛ ನ್ಯಾಯಾಲಯವನ್ನು ತುಚ್ಛೀಕರಿಸುವ ಅಸಂವಿಧಾನಿಕ ದೂಷಣೆ ಮಾಡಿದ್ದಾರೆ ಎಂದು ಸಮಿತಿ ಆರೋಪಿಸಿದೆ.

ಕರ್ನಾಟಕ ರಾಜ್ಯ ಪೋಲಿಸು ವರಿಷ್ಠಾಧಿಕಾರಿಗಳು, ಈ ಸಂವಿಧಾನ ಬಾಹಿರ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಿ, ಸಾರ್ವಜನಿಕ ಶಾಂತಿ ಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ, ಅವರ ಮೇಲೆ ಕಠಿಣ ಕ್ರಮವನ್ನು ಸ್ವವಿವೇಚನೆಯಿಂದ ಜರುಗಿಸಬೇಕು ಎಂದು ಸಹಬಾಳ್ವೆ, ಕುಂದಾಪುರ ತಾಲೂಕು ಸಂಚಾಲಕ ಸಮಿತಿಯು ಆಗ್ರಹಿಸುತ್ತದೆ ಎಂದು ಸಮಿತಿಯ ಅಧ್ಯಕ್ಷರು ಹಾಗೂ ಜನಪರ ಚಿಂತಕರಾದ ರಾಮಕೃಷ್ಣ ಹೇರ್ಳೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Recent Posts
Advertisement