Advertisement

ಸೈಟು ವಾಪಾಸು ನೀಡುವುದಾಗಿ ಸಿಎಂ ಪತ್ನಿಯಿಂದ ಮುಡಾಗೆ ಪತ್ರ!

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರ ಮಾಲಿಕತ್ವದ ಮೈಸೂರಿನ ಕೆಸರೆ ಗ್ರಾಮದಲ್ಲಿನ 3 ಎಕರೆ 16 ಗುಂಟೆ ವಿಸ್ತೀರ್ಣದ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕೆ ಬದಲಿಯಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ಮಂಜುರಾಗಿದ್ದ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮುಡಾಗೆ ವಾಪಾಸು ನೀಡಲು ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ನಿರ್ಧರಿಸಿದ್ದು ಆ ಕುರಿತು ಮುಡಾಗೆ ಪತ್ರ ಬರೆದಿದ್ದಾರೆ.

ಪತ್ರದ ಸಾರಾಂಶ ಇಂತಿದೆ:

ಇವರಿಗೆ,
ಆಯುಕ್ತರು,
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ
ಝಾನ್ಸಿ
ಲಕ್ಷ್ಮಿ ಬಾಯಿ ರಸ್ತೆ,
ಮೈಸೂರು,
ಕರ್ನಾಟಕ - 570 005

ಇಂದ,
ಶ್ರೀಮತಿ. ಪಾರ್ವತಿ,
W/o ಶ್ರೀ ಸಿದ್ದರಾಮಯ್ಯ,
R/a 'ಕಾವೇರಿ',
ಕುಮಾರ ಕೃಪಾ ರಸ್ತೆ,
ಬೆಂಗಳೂರು.

ಮಾನ್ಯರೇ,

ವಿಷಯ: ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ನನಗೆ ಮಂಜೂರು ಮಾಡಲಾದ 14 ನಿವೇಶನಗಳನ್ನು ಹಿಂದಿರುಗಿಸುವ ಕುರಿತು.

ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿರುವುದು ನಿಮಗೆ ತಿಳಿದಿದೆ.

ಮುಂದುವರಿದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ.

ವಂದನೆಗಳೊಂದಿಗೆ.

ತಮ್ಮ ವಿಶ್ವಾಸಿ
ಶ್ರೀಮತಿ ಪಾರ್ವತಿ

Advertisement
Advertisement
Recent Posts
Advertisement