Advertisement

ಸ್ಥಳೀಯ ಸಂಸ್ಥೆಗಳ ಕುಂದುಕೊರತೆಗಳ ಪರಿಹಾರ ನನ್ನ ಗುರಿ : ರಾಜು ಪೂಜಾರಿ

Advertisement

ಮರವಂತೆ ಪಂಚಾಯತ್‌ ಮಾಜಿ ಅಧ್ಯಕ್ಷರು ಹಾಗೂ ಖಂಬದಕೋಣೆ ಜಿಲ್ಲಾ ಪರಿಷತ್ ಕ್ಷೇತ್ರದ ಸದಸ್ಯರಾಗಿದ್ದ ಕಾಂಗ್ರೆಸ್‌ನ ಹಿರಿಯ ನಾಯಕ ದಿವಂಗತ ರಾಮ ಪೂಜಾರಿಯವರ ಪುತ್ರರಾಗಿರುವ ರಾಜು ಪೂಜಾರಿಯವರ ವೈಯಕ್ತಿಕ ವಿವರ: ಶಿಕ್ಷಣ:ಬಿ.ಕಾಂ, ವಯಸ್ಸು: 58, ಇವರು ಮೊದಲಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ ಸ್ಥಳೀಯಾಡಳಿತ ಕ್ಷೇತ್ರಕ್ಕೆ ದುಮುಕಿದರು. ಆ ನಂತರದಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಸದಸ್ಯ ಸ್ಥಾನಕ್ಕೆ ಸ್ಪರ್ಧೆ ಮಾಡಿ ಆಯ್ಕೆಯಾಗಿದ್ದರು. ತದನಂತರ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ಇವರು ಅಲ್ಲಿ ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು ಮತ್ತು ಉಡುಪಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷರಾಗಿಯೂ ಕೂಡ ಒಂದು ಅವಧಿಗೆ ಕರ್ತವ್ಯ ನಿರ್ವಹಿಸಿದ್ದರು.

ಸ್ಥಳೀಯಾಡಳಿತ ಸಂಸ್ಥೆಗಳ ಸಂಪೂರ್ಣ ಅರಿವು ಇರುವುದರಿಂದ ಅಲ್ಲಿನ ಕುಂದು ಕೊರತೆಗಳನ್ನು ಪರಿಹರಿಸಲು ವೇದಿಕೆ ಸಿಕ್ಕಿದರೆ ಅದಕ್ಕಾಗಿ ಶ್ರಮಿಸುತ್ತೇನೆ. ಮತದಾರರಿಗೂ ಇದು ಗೊತ್ತಿರುವುದರಿಂದ ಅವರು ಬೆಂಬಲಿಸುತ್ತಾರೆಂಬ ಪೂರ್ಣ ವಿಶ್ವಾಸ ನನಗಿದೆ: ರಾಜು ಪೂಜಾರಿ (ವಿಧಾನಪರಿಷತ್ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ )

ಪಕ್ಷ ಸಂಘಟನೆಯ ಜೊತೆಗೆ ಸಹಕಾರಿ ಕ್ಷೇತ್ರದಲ್ಲೂ ಹೆಸರು ಮಾಡಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಜನಪರ ಕಾಳಜಿಯ ನಾಯಕ ರಾಜು ಪೂಜಾರಿ ಅವರನ್ನು ದಕ್ಷಿಣ ಕನ್ನಡ- ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಕಣಕ್ಕಿಳಿಸಿದ್ದು ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದೆ.

ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸದಸ್ಯರಾಗಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿರುವ ರಾಜು ಪೂಜಾರಿ ಅವರು ಈಗ ಪರಿಷತ್‌ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಈ ಸಂದರ್ಭದಲ್ಲಿ ಅವರು ನೀಡಿರುವ ಪತ್ರಿಕಾ ಹೇಳಿಕೆಯ ಮುಖ್ಯಾಂಶಗಳು ಇಲ್ಲಿದೆ.

1. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳಿಗೂ ಭೇಟಿ ನೀಡಿ ಸಾಧ್ಯವಾದಷ್ಟು ಮತದಾರರನ್ನು ಭೇಟಿಯಾಗಿ ಮತಯಾಚಿಸಿದ್ದೇನೆ. ಆರು ಸಾವಿರದಷ್ಟಿರುವ ಮತದಾರರನ್ನು ನೇರವಾಗಿ ಭೇಟಿಯಾಗಲು ಸಾಧ್ಯವಾಗದ ಕಾರಣ ಎಲ್ಲಾ ಮತದಾರರಿಗೂ ಮೊಬೈಲ್ ಸೇರಿದಂತೆ ವಿವಿಧ ಮಾಧ್ಯಮಗಳ ಮೂಲಕ ಮತ ನೀಡುವಂತೆ ಮನವಿ ಮಾಡಿದ್ದೇನೆ.

2. ಗ್ರಾಮ ಪಂಚಾಯಿತಿ ಎಂದರೆ ಗ್ರಾಮ ಸರ್ಕಾರ. ಎಲ್ಲಾ ಜನರು ತಮ್ಮ ಸಮಸ್ಯೆಗಳನ್ನು ಮೊದಲು ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕೆ ತರುತ್ತಾರೆ. ಆದ್ದರಿಂದ ನಾನು ಆಯ್ಕೆಯಾದರೆ ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಕಾರ್ಯ ನಿರ್ವಹಿಸುವೆ. ಎಲ್ಲಾ ಸಮಸ್ಯೆಗಳು ಗ್ರಾಮ ಸರ್ಕಾರ ಮಟ್ಟದಲ್ಲೇ ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನಿಸುವೆ.

3. ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ವ್ಯವಸ್ಥೆಗಳಲ್ಲೂ ನಾನು ಕೆಲಸ ಮಾಡಿದ್ದೇನೆ. ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳ ಸಮಸ್ಯೆ, ಅವರಿಗೂ ಜನರಿಗೂ ಇರುವ ಸಂಪರ್ಕ, ಅವರು ಜನರ ಸಮಸ್ಯೆಗಳಿಗೆ ಹೇಗೆ ಸ್ಪಂದನೆ ಮಾಡುತ್ತಾರೆ ಎಂಬ ಸಂಪೂರ್ಣ ಅರಿವು ನನಗಿದೆ. ಆದ್ದರಿಂದ ನಾನು ಪರಿಷತ್ ಸದಸ್ಯನಾಗಿ ಆಯ್ಕೆಯಾದರೆ ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳಿಗಾಗಿ ಪರಿಷತ್‌ನಲ್ಲಿ ಧ್ವನಿ ಎತ್ತುತ್ತೇನೆ.

4. ಮೂವತ್ತೈದು ವರ್ಷಗಳಿಂದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಅದನ್ನು ಗುರುತಿಸಿ ಪಕ್ಷವು ನನಗೆ ಟಿಕೆಟ್ ನೀಡಿದೆ ಎಂದು ಭಾವಿಸಿದ್ದೇನೆ. ನನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದರಲ್ಲಿ ಜಾತಿ ಲೆಕ್ಕಾಚಾರ ಕೆಲಸ ಮಾಡಿದೆ ಎಂದು ನನಗೆ ಅನ್ನಿಸಿಲ್ಲ. ಎಲ್ಲಾ ಜಾತಿಯ ಮತದಾರರೂ ನನಗೆ ಬೆಂಬಲ ಸೂಚಿಸಿದ್ದಾರೆ.

5. ಕೆಲವೊಮ್ಮೆ ಅನುದಾನಗಳು ಸರಿಯಾದ ಸಮಯಕ್ಕೆ ಬರುವುದಿಲ್ಲ. ಇದರಿಂದ ಪಂಚಾಯಿತಿಗಳ ಕಾರ್ಯಕ್ರಮಗಳು ಬೇಗನೆ ಅನುಷ್ಠಾನಗೊಳ್ಳುವುದಿಲ್ಲ. ಅದಕ್ಕೆ ಬೇರೆ ಬೇರೆ ತಾಂತ್ರಿಕ ಕಾರಣಗಳಿರುತ್ತವೆ. ವಿಳಂಬಕ್ಕೆ ಮಾಹಿತಿ ಕೊರತೆಯೂ ಕಾರಣವಾಗುತ್ತದೆ.

Advertisement
Advertisement
Recent Posts
Advertisement